Webdunia - Bharat's app for daily news and videos

Install App

ಒಂದು ಹಿಟ್ ಚಿತ್ರಕ್ಕೆ ಕನ್ನಡ ಬಿಟ್ಟು ಓಡಿ ಹೋಗೋನಲ್ಲ ನಾನು: ರಿಷಬ್ ಶೆಟ್ಟಿ

Webdunia
ಬುಧವಾರ, 29 ನವೆಂಬರ್ 2023 (09:00 IST)
ಪಣಜಿ: ಕಾಂತಾರ ಒಂದು ಸಿನಿಮಾ ಹಿಟ್ ಆಯ್ತು ಎಂದು ಕನ್ನಡ ಬಿಟ್ಟು ಬೇರೆ ಭಾಷೆಗಳಿಗೆ ಓಡಿ ಹೋಗಲ್ಲ. ಕನ್ನಡವೇ ನನ್ನ ಮೊದಲ ಆದ್ಯತೆ ಎಂದು ನಟ, ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದಾರೆ.

ಐಎಫ್ಎಫ್ಐ ಚಿತ್ರೋತ್ಸವದಲ್ಲಿ ಕಾಂತಾರ ಸಿನಿಮಾ ಪ್ರದರ್ಶನದ ಬಳಿಕ ಮಾತನಾಡಿದ ರಿಷಬ್ ಈ ರೀತಿ ಹೇಳಿದ್ದಾರೆ. ಗೋವಾ ಅಂತಾರಾಷ್ಟ್ರೀಯ ಫಿಲಂ ಫೆಸ್ಟಿವಲ್ ನಲ್ಲಿ ರಿಷಬ್ ಕಾಂತಾರ ಸಿನಿಮಾಗಾಗಿ ಸ್ಪೆಷಲ್ ಜ್ಯೂರಿ ಅವಾರ್ಡ್ ಕೂಡಾ ಪಡೆದಿದ್ದಾರೆ.

ಸಂವಾದದಲ್ಲಿ ತಮಗೆ ಪರಭಾಷೆಗಳಿಂದ ಬಂದ ಅವಕಾಶಗಳ ಬಗ್ಗೆ ರಿಷಬ್ ಮುಕ್ತವಾಗಿ ಮಾತನಾಡಿದ್ದಾರೆ. ಹಿಂದಿ ಸೇರಿದಂತೆ ಬೇರೆ ಭಾಷೆಗಳಿಂದ ಸಾಕಷ್ಟು ಆಫರ್ ಬಂದಿದೆ. ಆದರೆ ನಾನು ಕನ್ನಡ ಚಿತ್ರರಂಗದವನು.ಅಲ್ಲಿಯೇ ಕೆಲಸ ಮಾಡಲು ಇಚ್ಛಿಸುವೆ ಎಂದಿದ್ದಾರೆ.

ಕಾಂತಾರವನ್ನು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದವರು ಕನ್ನಡಿಗರು. ಅವರ ಋಣ ಮರೆಯಲಾರೆ. ಕಾಂತಾರದ ಯಶಸ್ಸು ತಲೆಗೆ ಏರಿಲ್ಲ. ಅದನ್ನು ಹೃದಯದಲ್ಲೇ ಇಟ್ಟುಕೊಂಡಿದ್ದೇನೆ. ಒಂದು ವೇಳೆ ಯಶಸ್ಸು ನನ್ನ ತಲೆಗೇರಿದರೆ ಅದೇ ನನ್ನ ಕೊನೆಯ ಸಿನಿಮಾ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments