Webdunia - Bharat's app for daily news and videos

Install App

ಬುಕ್ಸ್‌ ಓದುತ್ತಿರುವ ದರ್ಶನ್ ನೋಡಿ ಸಮಾಧಾನ ಆಯಿತು: ಸಾಧುಕೋಕಿಲ

Sampriya
ಗುರುವಾರ, 25 ಜುಲೈ 2024 (16:48 IST)
Photo Courtesy X
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರನ್ನು ಸಂಗೀತ ನಿರ್ದೇಶಕ ಸಾಧುಕೋಕಿಲ ಅವರು ಇಂದು ಭೇಟಿಯಾಗಿದ್ದಾರೆ. ಈಚೆಗೆ ದರ್ಶನ್ ಅವರನ್ನು ಭೇಟಿಯಾಗಲು ಚಿತ್ರರಂಗದ ಗಣ್ಯರು ಪರಪ್ಪನ ಅಗ್ರಹಾರಕ್ಕೆ ಆಗಮಿಸುತ್ತಿದ್ದಾರೆ. ಈಚೆಗೆ ನಟ ವಿನೋದ್ ರಾಜ್, ತರುಣ್ ಸುಧೀರ್, ಯಶಸ್ ಸೂರ್ಯ ಅವರು ಭೇಟಿಯಾಗಿ ಮಾತುಕತೆ ನಡೆಸಿದ್ದರು.

ಇದೀಗ ಸಾಧುಕೋಕಿಲ ಅವರು ದರ್ಶನ್ ಅವರನ್ನು ಭೇಟಿಯಾಗಿ ಕೆಲಹೊತ್ತು ಮಾತುಕತೆ ನಡೆಸಿದರು. ಈ ವೇಳೆ ದರ್ಶನ್ ಅವರ ಸಹೋದರ ದಿನಕರ್ ತೂಗುದೀಪ್ ಕೂಡಾ ಇದ್ದರು.

ಭೇಟಿ ನಂತರ ಮಾತನಾಡಿದ ಸಾಧುಕೋಕಿಲ ಅವರು, ಕಳೆದ ಮಂಗಳವಾರ ದರ್ಶನ್ ಭೇಟಿಗೆ ಬಂದಿದ್ದೆ, ಆಗಿರಲಿಲ್ಲ. ಮೆಜೆಸ್ಟಿಕ್ ಸಿನಿಮಾ ನಿರ್ಮಾಪಕ ರಾಮಮೂರ್ತಿ ಸೇರಿದಂತೆ ನಮ್ಮ ಸ್ನೇಹಿತರ ಬಳಗ ದರ್ಶನ್ ಅವರನ್ನು ಭೇಟಿಯಾಗಿ ಬಂದಿದ್ದೇವೆ.

ದರ್ಶನ್ ಅವರು ಜೈಲಿನಲ್ಲಿ ಬುಕ್ಸ್ ಓದಿಕೊಂಡು ಆರಾಮಾಗಿ ಇದ್ದಾರೆ. ಅವರನ್ನು ನೋಡಿ ಇದೀಗ ನೆಮ್ಮದಿ ಸಿಕ್ತು. ನಾವು ಅವರ ಮೊದಲನೇ ಸಿನಿಮಾ ಮೆಜೆಸ್ಟಿಕ್​ನಿಂದ ಸ್ನೇಹಿತರು. ನಟ ದರ್ಶನ್ ಏನೂ ಅಂತಾ ಚೆನ್ನಾಗಿ ಗೊತ್ತು. ಒಬ್ಬ ಬ್ರದರ್ ಆಗಿ ನಟ ದರ್ಶನ್ ನೋಡ್ಲಿಕ್ಕೆ ಬಂದಿದ್ದೇನೆ ಎಂದು ಹೇಳಿದರು.

ದರ್ಶನ್ ಆರೋಗ್ಯವಾಗಿದ್ದು, ಕಾನೂನು ರೀತಿಯಲ್ಲಿ ನಟ ದರ್ಶನ್​ಗೆ ಚಿಕಿತ್ಸೆ ಮತ್ತು ಇತರೆ ವ್ಯವಸ್ಥೆ ಕಲ್ಪಿಸಿದ್ದಾರೆ ಎಂದು ಸಾಧುಕೋಕಿಲ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಮುಂದಿನ ಸುದ್ದಿ
Show comments