Webdunia - Bharat's app for daily news and videos

Install App

ನಾಗಚೈತನ್ಯ ಮೇಲೆ ಅನುಮಾನಗೊಂಡು ಫೋನ್ ಟ್ಯಾಪ್ ಮಾಡಿಸಿದ್ದರಂತೆ ಸಮಂತಾ!

Krishnaveni K
ಗುರುವಾರ, 28 ಮಾರ್ಚ್ 2024 (11:23 IST)
Photo Courtesy: Twitter
ಹೈದರಾಬಾದ್: ತೆಲಂಗಾಣದಲ್ಲಿ ಈಗ ಫೋನ್ ಟ್ಯಾಪಿಂಗ್ ವಿವಾದ ಭಾರೀ ಸದ್ದು ಮಾಡುತ್ತಿದೆ. ಫೋನ್ ಟ್ಯಾಪಿಂಗ್ ಪ್ರಕರಣದಲ್ಲಿ ದೊಡ್ಡ ದೊಡ್ಡವರ ಹೆಸರೇ ಕೇಳಿಬರುತ್ತಿದೆ.

ಫೋನ್ ಟ್ಯಾಪಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳನ್ನೇ ಬಂಧಿಸಲಾಗಿದೆ. ರಾಜ್ಯ ಗುಪ್ತಚರ ಇಲಾಖೆಯ ಮುಖ್ಯಸ್ಥನ ವಿರುದ್ಧವೇ ಲುಕ್ ಔಟ್ ನೋಟಿಸ್ ಜಾರಿಯಾಗಿದೆ. ಹಲವು ಉದ್ಯಮಿಗಳು, ರಾಜಕಾರಣಿಗಳು, ಸಿನಿಮಾ ನಟ-ನಟಿಯರ ಫೋನ್ ಟ್ಯಾಪ್ ಮಾಡಲಾಗಿತ್ತು ಎನ್ನಲಾಗಿದೆ.

ಇದೀಗ ಯೂ ಟ್ಯೂಬ್ ವಾಹಿನಿಯೊಂದು ನಟಿ ಸಮಂತಾ-ನಾಗಚೈತನ್ಯ ದಾಂಪತ್ಯ ಜೀವನ ಮುರಿದು ಬೀಳುವುದಕ್ಕೂ ಫೋನ್ ಟ್ಯಾಪಿಂಗ್ ಕಾರಣ ಎಂದು ವರದಿ ಮಾಡಿದೆ. ನಾಗಚೈತನ್ಯ ವರ್ತನೆ ಬಗ್ಗೆ ಅಸಮಾಧಾನ ಹೊಂದಿದ್ದ ಸಮಂತಾ ಪತಿಯ ಫೋನ್ ಟ್ಯಾಪಿಂಗ್ ಮಾಡಿಸಿದ್ದರು. ಇದೇ ಕಾರಣಕ್ಕೆ ಇಬ್ಬರೂ ದೂರವಾದರು ಎಂದು ವಾಹಿನಿ ವರದಿ ಮಾಡಿದೆ.

ಫೋನ್ ಟ್ಯಾಪಿಂಗ್ ಪ್ರಕರಣದಲ್ಲಿ ಅನೇಕ ಘಟಾನುಘಟಿಗಳ ಹೆಸರು ಕೇಳಿಬಂದಿದೆ. ಇದೀಗ ತೆಲಂಗಾಣ  ಮುಖ್ಯಮಂತ್ರಿಯಾಗಿರುವ ರೇವಂತ್ ರೆಡ್ಡಿಯ ಫೋನ್ ಕೂಡಾ ಟ್ಯಾಪ್ ಆಗಿತ್ತು ಎಂದು ವರದಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

ಮುಂದಿನ ಸುದ್ದಿ
Show comments