Webdunia - Bharat's app for daily news and videos

Install App

ದರ್ಶನ್ ರನ್ನು ರೇಣುಕಾಸ್ವಾಮಿ ಪ್ರಕರಣದಲ್ಲಿ ಎಸಿಪಿ ಚಂದನ್ ಸಿಲುಕಿಸಿದ್ದಾರೆ: ಸ್ನೇಹಮಯಿ ಕೃಷ್ಣ ಆರೋಪ

Krishnaveni K
ಬುಧವಾರ, 27 ನವೆಂಬರ್ 2024 (10:00 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ರನ್ನು ಎಸಿಪಿ ಚಂದನ್ ಅವರೇ ದುರುದ್ದೇಶದಿಂದ ಸಿಲುಕಿಸಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೆಹಮಯಿ ಕೃಷ್ಣ ಆರೋಪಿಸಿದ್ದಾರೆ.

ಇಷ್ಟು ದಿನ ಸಿಎಂ ಸಿದ್ದರಾಮಯ್ಯ ಮುಡಾ ಹಗರಣದಲ್ಲಿ ಆರೋಪಗಳನ್ನು ಮಾಡಿ ಸುದ್ದಿಯಾಗಿದ್ದ ಸ್ನೇಹಮಯಿ ಕೃಷ್ಣ ಈಗ ದರ್ಶನ್ ಪ್ರಕರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಎಸಿಪಿ ಚಂದನ್ ವಿರುದ್ಧ ಗಂಭೀರ ಆರೋಪ ಹೊರಿಸಿರುವ ಸ್ನೇಹಮಯಿ ಕೃಷ್ಣ ಪ್ರಕರಣದಲ್ಲಿ ದರ್ಶನ್ ರನ್ನು ಬೇಕೆಂದೇ ಕೊಲೆ ಮಾಡಿದ್ದಾರೆ ಎಂದು ಸಿಲುಕಿಸಲಾಗಿದೆ ಎಂದಿದ್ದಾರೆ.

ದರ್ಶನ್ ಗೆ ರೇಣುಕಾಸ್ವಾಮಿಯನ್ನು ಕೊಲೆ ಮಾಡಬೇಕು ಎಂಬ ಉದ್ದೇಶವಿದ್ದಿದ್ದರೆ ಚಿತ್ರದುರ್ಗದಲ್ಲೇ ಕೊಲೆ ಮಾಡುತ್ತಿದ್ದರು. ಬೆಂಗಳೂರುವರೆಗೆ ಯಾಕೆ ಕರೆತರಬೇಕಿತ್ತು. ಇಲ್ಲಿಗೆ ರೇಣುಕಾಸ್ವಾಮಿಯನ್ನು ಕರೆತಂದಿದ್ದು ದರ್ಶನ್ ಗೆ ಮಧ್ಯಾಹ್ನ 3 ಗಂಟೆಯವರೆಗೂ ಗೊತ್ತಿರಲಿಲ್ಲ. ಇದೆಲ್ಲಾ ಅವರ ಸಹವರ್ತಿಗಳು ಮಾಡಿದ್ದು.

ಇನ್ನು ಪ್ರಕರಣದಲ್ಲಿ ಪಿಎಸ್ ಐ ವಿನಯ್ ಮತ್ತು ಇನ್ಸ್ ಪೆಕ್ಟರ್ ಗಿರೀಶ್ ನಾಯಕ್ ಅವರದ್ದು ತಪ್ಪಾಗಿದೆ. ಅವರ ತಪ್ಪುಗಳನ್ನು ಮುಚ್ಚಿ ಹಾಕಲು ಎಸಿಪಿ ಚಂದನ್ ಬೇಕೆಂದೇ ದರ್ಶನ್ ರನ್ನು ಸಿಲುಕಿಸಿದ್ದಾರೆ. ಅಸಲಿಗೆ ದರ್ಶನ್ ಮೇಲೆ ಪಿತೂರಿ ಮಾಡಿ ರೇಣುಕಾಸ್ವಾಮಿಯನ್ನು ಇಲ್ಲಿಗೆ ಕರೆಸಿಕೊಂಡ ಆರೋಪ ಮಾತ್ರವಿದೆ.

ಆದರೆ ಕೊಲೆ ಮಾಡುವ ಉದ್ದೇಶ ದರ್ಶನ್ ಗಿರಲಿಲ್ಲ. ಅವರ ಸಹವರ್ತಿಗಳು ಮಾಡಿದ ಹಲ್ಲೆಯಿಂದ ಆತ ಸಾವನ್ನಪ್ಪಿರಬಹುದು. ಹೀಗಾಗಿ ಇಲ್ಲಿ ದರ್ಶನ್ ಮೇಲೆ ಕೊಲೆ ಪ್ರಕರಣ ದಾಖಲಿಸಬೇಕಾಗಿರಲಿಲ್ಲ. ಆದರೆ ಎಸಿಪಿ ಚಂದನ್ ದುರುದ್ದೇಶದಿಂದ ಕೊಲೆ ಪ್ರಕರಣವನ್ನು ದಾಖಲಿಸಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಹೇಳಿದ್ದಾರೆ. ಅಷ್ಟೇ ಅಲ್ಲ, ದೋಷಾರೋಪ ಪಟ್ಟಿಯಲ್ಲಿರುವ ವಿಚಾರಗಳನ್ನಿಟ್ಟುಕೊಂಡು ದರ್ಶನ್ ವಿರುದ್ಧ ಪಿತೂರಿ ಮಾಡಲಾಗಿದೆ ಎಂದು ಆರೋಪಿಸಿ ಹೋರಾಟಕ್ಕೆ ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments