Select Your Language

Notifications

webdunia
webdunia
webdunia
webdunia

ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್‌, ಒಂದೊಂದು ತೀರವಾದ ಡಿ ಗ್ಯಾಂಗ್

Actor Darshan

Sampriya

ಬೆಂಗಳೂರು , ಮಂಗಳವಾರ, 27 ಆಗಸ್ಟ್ 2024 (21:17 IST)
Photo Courtesy X
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಅನುಮತಿ ನೀಡಿದೆ.

ಪರಪ್ಪನ ಅಗ್ರಹಾರದಲ್ಲಿದ್ದ ದರ್ಶನ್‌ಗೆ ವಿಶೇಷ ಅತಿಥ್ಯಕ್ಕೆ ಸಂಬಂಧಿಸಿದಂತೆ ದಾಖಲಾದ ಮೂರು ಪ್ರಕರಣಗಳಲ್ಲಿ ದರ್ಶನ್ ಎರಡರಲ್ಲಿ ಮೊದಲ ಆರೋಪಿಯಾಗಿದ್ದಾರೆ.  ಈ ಪ್ರಕರಣ ಸಂಬಂಧ ಈಗಾಗಲೇ ಪೊಲೀಸ್ ಇಲಾಖೆ ಮೂರು ತಂಡಗಳನ್ನು ರಚಿಸಿ ತನಿಖೆ ನಡೆಸುತ್ತಿದೆ.

ಇನ್ನೂ ವಿಚಾರಣಾಧೀನ ಕೈದಿಗಳ ಸ್ಥಳಾಂತರಕ್ಕೆ ಅನುಮತಿ ಕೋರಿ ಪೊಲೀಸರು ಹಾಗೂ ಜೈಲಾಧಿಕಾರಿಗಳು  ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ದರ್ಶನ್ ಜತೆಗೆ ಬೇರೆ ವಿಚಾರಣಾಧೀನ ಕೈದಿಗಳನ್ನೂ ಬೇರೆಡೆ ಸ್ಥಳಾಂತರ ಮಾಡಲು ನ್ಯಾಯಾಲಯ ಗ್ರೀನ್ ಸಿಗ್ನಲ್ ಕೊಟ್ಟಿದೆ.

ಅದರಂತೆ ದರ್ಶನ್ ಅವರನ್ನು ಬಳ್ಳಾರಿ ಜೈಲು, ಪವನ್, ರಾಘವೇಂದ್ರ ನಂದೀಶ್ ಮೈಸೂರು ಜೈಲಿಗೆ, ಜಗದೀಶರ್ ಶಿವಮೊಗ್ಗ ಜೈಲಿಗೆ, ಧನರಾಜ್ ಧಾರವಾಡ ಜೈಲಿಗೆ, ವಿನಯ್ ವಿಜಯಪುರ ಜೈಲಿಗೆ, ನಾಗರಾಜ್ ಕಲಬುರಗಿ ಜೈಲಿಗೆ, ಲಕ್ಷ್ಮಣ ಶಿವಮೊಗ್ಗ ಜೈಲಿಗೆ, ಪ್ರದೂಷ್ ಬೆಳಗಾವಿ ಜೈಲಿಗೆ ಶಿಫ್ಟ್ ಆಗಲಿದ್ದಾರೆ. ಪವಿತ್ರಾ ಗೌಡ, ಅನುಕುಮಾರ್, ದೀಪಕ್ ಅವರನ್ನು ಪರಪ್ಪನ ಅಗ್ರಹಾರದಲ್ಲೇ ಇರಿಸಿಕೊಳ್ಳಲಾಗಿದೆ.

ಈಗಾಗಲೇ ರವಿ, ಕಾರ್ತಿಕ್, ನಿಖಿಲ್, ಕೇಶವಮೂರ್ತಿ ಅವರನ್ನು ತುಮಕೂರು ಜೈಲಿಗೆ ಸ್ಥಳಾಂತರ ಮಾಡಲಾಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

27 ವರ್ಷಗಳ ಬಳಿಕ ಮತ್ತೇ ಒಂದಾದ ಕಂರ್ಪೂರದ ಗೊಂಬೆ ಜೋಡಿ