Publish Date: Tue, 25 Sep 2018 (08:27 IST)
Updated Date: Tue, 25 Sep 2018 (08:29 IST)
ಬೆಂಗಳೂರು : ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಕಿಚ್ಚ ಸುದೀಪ್ ಅವರು ಟ್ವೀಟ್ ಮಾಡಿ ಶುಭ ಹಾರೈಸಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್, ಹಿರಿಯ ನಟ ದೇವರಾಜ್ ಹಾಗೂ ಪ್ರಜ್ವಲ್ ದೇವರಾಜ್ ಅವರು ಚಲಿಸುತ್ತಿದ್ದ ಕಾರು ಮೈಸೂರಿನ ಹಿನಕಲ್ ಬಳಿ ಸೋಮವಾರ ಮುಂಜಾನೆ ಸುಮಾರು 3 ಗಂಟೆ ವೇಳೆ ಅಪಘಾತಕ್ಕೀಡಾಗಿತ್ತು.
ಈ ಸುದ್ದಿ ತಿಳಿದು ಸುದೀಪ್ ಆತಂಕಗೊಂಡಿದ್ದಾರೆ. ಮಾತ್ರವಲ್ಲ ಈ ಬಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್ 'ನೀನು ಆರೋಗ್ಯವಾಗಿರೋ ಸುದ್ದಿ ಕೇಳಿದೆ. ಆದಷ್ಟು ಬೇಗ ಹುಷಾರಾಗು ಗೆಳೆಯ' ಎಂದು ಬರೆದುಕೊಂಡಿದ್ದಾರೆ.