Select Your Language

Notifications

webdunia
webdunia
webdunia
webdunia

ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಶುಭ ಹಾರೈಸಿ ಟ್ವೀಟ್ ಮಾಡಿದ ಕಿಚ್ಚ ಸುದೀಪ್

ಬೆಂಗಳೂರು
ಬೆಂಗಳೂರು : ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಕಿಚ್ಚ ಸುದೀಪ್ ಅವರು ಟ್ವೀಟ್ ಮಾಡಿ ಶುಭ ಹಾರೈಸಿದ್ದಾರೆ.


ಚಾಲೆಂಜಿಂಗ್ ಸ್ಟಾರ್ ದರ್ಶನ್, ಹಿರಿಯ ನಟ ದೇವರಾಜ್ ಹಾಗೂ ಪ್ರಜ್ವಲ್ ದೇವರಾಜ್ ಅವರು ಚಲಿಸುತ್ತಿದ್ದ ಕಾರು ಮೈಸೂರಿನ ಹಿನಕಲ್ ಬಳಿ ಸೋಮವಾರ ಮುಂಜಾನೆ ಸುಮಾರು 3 ಗಂಟೆ ವೇಳೆ ಅಪಘಾತಕ್ಕೀಡಾಗಿತ್ತು.


ಈ ಸುದ್ದಿ ತಿಳಿದು ಸುದೀಪ್​ ಆತಂಕಗೊಂಡಿದ್ದಾರೆ. ಮಾತ್ರವಲ್ಲ ಈ ಬಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್ 'ನೀನು ಆರೋಗ್ಯವಾಗಿರೋ ಸುದ್ದಿ ಕೇಳಿದೆ. ಆದಷ್ಟು ಬೇಗ ಹುಷಾರಾಗು ಗೆಳೆಯ' ಎಂದು ಬರೆದುಕೊಂಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಫಿಲ್ಮ್ ಚೇಂಬರ್ ನಟ ವಿಜಯ್ ಗೆ ಚಿತ್ರರಂಗದಿಂದ ಬಹಿಷ್ಕಾರ ಹಾಕುತ್ತಾ?