Webdunia - Bharat's app for daily news and videos

Install App

ಇಂತಹವರಿಗೆ ಆಸ್ಕರ್ ಅವಾರ್ಡ್ ಕೊಡ್ಬೇಕು: ದರ್ಶನ್ ಅನ್ ಫಾಲೋ ಮಾಡಿದ ಬೆನ್ನಲ್ಲೇ ಸುಮಲತಾ ಪೋಸ್ಟ್

Krishnaveni K
ಬುಧವಾರ, 12 ಮಾರ್ಚ್ 2025 (11:30 IST)
ಬೆಂಗಳೂರು: ಇನ್ ಸ್ಟಾಗ್ರಾಂನಲ್ಲಿ ನಟ ದರ್ಶನ್ ತಮ್ಮನ್ನು ಅನ್ ಫಾಲೋ ಮಾಡಿದ ಬೆನ್ನಲ್ಲೇ ಸುಮಲತಾ ಅಂಬರೀಶ್ ಮಾಡಿರುವ ಪೋಸ್ಟ್ ಒಂದು ಎಲ್ಲರ ಗಮನ ಸೆಳೆಯುತ್ತಿದೆ. ಇಂತಹವರಿಗೆ ಆಸ್ಕರ್ ಅವಾರ್ಡ್ ಕೊಡಬೇಕು ಎಂದು ಅವರು ಸಾಲುಗಳೊಂದನ್ನು ಬರೆದುಕೊಂಡಿದ್ದಾರೆ.

ನಿನ್ನೆಯಷ್ಟೇ ನಟ ದರ್ಶನ್ ತಮ್ಮ ಇನ್ ಸ್ಟಾಗ್ರಾಂ ಖಾತೆಯಿಂದ ಸುಮಲತಾ ಅಂಬರೀಶ್, ಅಭಿಷೇಕ್ ಅಂಬರೀಶ್ ಸೇರಿದಂತೆ ಎಲ್ಲಾ ಆರು ಫಾಲೋವರ್ ಗಳನ್ನು ಅನ್ ಫಾಲೋ ಮಾಡಿದ್ದು ಭಾರೀ ಸುದ್ದಿಯಾಗಿದೆ. ಸುಮಲತಾ ಮತ್ತು ದರ್ಶನ್ ನಡುವೆ ಬಿರುಕು ಮೂಡಿದೆಯಾ ಎಂಬ ಸುದ್ದಿ ಹಬ್ಬಿದೆ.

ಇದರ ನಡುವೆ ಸುಮಲತಾ ಇಂದು ಇನ್ ಸ್ಟಾಗ್ರಾಂನಲ್ಲಿ ಒಂದು ಸಾಲು ಬರೆದುಕೊಂಡಿದ್ದಾರೆ. ಇದರಲ್ಲಿ ‘ಆಸ್ಕರ್ ಅವಾರ್ಡ್ ಇವರಿಗೆ ಹೋಗುತ್ತದೆ. ಯಾರೆಂದರೆ ಸತ್ಯ ಮರೆ ಮಾಚುತ್ತಾರೆ, ಯಾರು ಇನ್ನೊಬ್ಬರಿಗೆ ನೋವು ಕೊಡುತ್ತಾರೆ, ಆರೋಪಗಳನ್ನು ಇನ್ನೊಬ್ಬರ ಮೇಲೆ ಹೊರಿಸುತ್ತಾರೆ, ಅಂತಹವರು ತಮ್ಮನ್ನು ತಾವು ಹೀರೋ ಅಂದುಕೊಳ್ಳುತ್ತಾರೆ’ ಎಂದು ಸುಮಲತಾ ಪೋಸ್ಟ್ ಮಾಡಿದ್ದಾರೆ.

ಈ ಪೋಸ್ಟ್ ಮತ್ತಷ್ಟು ಹುಬ್ಬೇರುವಂತೆ ಮಾಡಿದೆ. ಈ ಸಾಲುಗಳನ್ನು ಸುಮಲತಾ ತಮ್ಮ ಮತ್ತು ದರ್ಶನ್ ನಡುವೆ ಭಿನ್ನಾಭಿಪ್ರಾಯ ಹುಟ್ಟಿದೆ ಎಂದು ಸುದ್ದಿ ಮಾಡಿರುವ ಮಾಧ್ಯಮಗಳನ್ನು ಉದ್ದೇಶಿಸಿ ಮಾಡಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

ಮುಂದಿನ ಸುದ್ದಿ
Show comments