Webdunia - Bharat's app for daily news and videos

Install App

ಮದುವೆಗೆ ಬನ್ನಿ ಅಣ್ಣಾ.. ಜೈಲಿನಲ್ಲಿರುವ ದರ್ಶನ್ ಗೆ ಮದುವೆ ಆಮಂತ್ರಣ ಕೊಟ್ಟ ತರುಣ್ ಸುಧೀರ್

Krishnaveni K
ಶುಕ್ರವಾರ, 19 ಜುಲೈ 2024 (13:33 IST)
Photo Credit: Facebook
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ರನ್ನು ಇಂದು ಕಾಟೇರ ನಿರ್ದೇಶಕ ತರುಣ್ ಸುಧೀರ್ ಭೇಟಿಯಾಗಿದ್ದಾರೆ. ಈ ವೇಳೆ ತಮ್ಮ ಮದುವೆಗೆ ಆಮಂತ್ರಣ ನೀಡಿದ್ದಾರೆ ಎನ್ನಲಾಗುತ್ತಿದೆ.

ನಿರ್ದೇಶಕ ತರುಣ್ ಸುಧೀರ್ ಮತ್ತು ನಟಿ ಸೊನಾಲ್ ಮೊಂಥಾರಿಯೊ ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗಳಿವೆ. ಮುಂದಿನ ತಿಂಗಳು ಇಬ್ಬರೂ ಮದುವೆಯಾಗಲಿದ್ದಾರೆ ಎಂಬ ಸುದ್ದಿಯಿದೆ. ಇದನ್ನು ಇನ್ನೂ ತರುಣ್ ಖಚಿತವಾಗಿ ಹೇಳಿಲ್ಲ. ಆದರೆ ಸೊನಾಲ್ ಜೊತೆ ಮದುವೆಯಾಗುವ ಬಗ್ಗೆ ಕೇಳಿದಾಗ ಆಷಾಢ ಮುಗಿದ ಮೇಲೆ ಮಾತುಕತೆ ನಡೆಸುವುದಾಗಿ ತರುಣ್ ತಾಯಿ ಹೇಳಿದ್ದರು.

ಇವರಿಬ್ಬರ ಸಂಬಂಧಕ್ಕೆ ಸೇತುವೆಯಾಗಿದ್ದೇ ನಟ ದರ್ಶನ್ ಎನ್ನಲಾಗಿದೆ. ರಾಬರ್ಟ್ ಸಿನಿಮಾದಲ್ಲಿ ಈ ಮೂವರೂ ಒಟ್ಟಿಗೇ ಕೆಲಸ ಮಾಡಿದ್ದಾರೆ. ಆಗಿನಿಂದಲೇ ದರ್ಶನ್ ಇವರಿಬ್ಬರನ್ನೂ ಕಿಚಾಯಿಸುತ್ತಲೇ ಇದ್ದರು. ಇದರಿಂದಲೇ ಇಬ್ಬರ ನಡುವೆ ಪ್ರೀತಿ ಅರಳಿದೆ ಎನ್ನಲಾಗುತ್ತಿದೆ. ಇದಲ್ಲದೆ ದರ್ಶನ್ ರನ್ನು ತರುಣ್ ಅಣ್ಣನ ರೀತಿ ನೋಡುತ್ತಾರೆ.

ಹೀಗಾಗಿ ಈಗ ತಮ್ಮ ಮದುವೆಯ ಮೊದಲ ಆಮಂತ್ರಣ ಪತ್ರಿಕೆಯನ್ನು ದರ್ಶನ್ ಗೇ ನೀಡಬೇಕು, ಮದುವೆ ಬಗ್ಗೆ ಅವರೊಂದಿಗೆ ಮಾತನಾಡಬೇಕು ಎಂದು ತರುಣ್ ಜೈಲಿಗೆ ಭೇಟಿ ನೀಡಿದ್ದರು ಎನ್ನಲಾಗಿದೆ. ಆದರೆ ಈ ವೇಳೆ ತರುಣ್ ಮಾಧ್ಯಮಗಳ ಕೈಗೆ ಸಿಗಲಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments