Daily Horoscope

ಪೌರತ್ವ ತಿದ್ದುಪಡಿ ಪ್ರತಿಭಟನೆಗೆ ತನ್ನದೇ ವ್ಯಾಖ್ಯಾನ ಕೊಟ್ಟ ರಿಯಲ್ ಸ್ಟಾರ್ ಉಪೇಂದ್ರ

Webdunia
ಬುಧವಾರ, 18 ಡಿಸೆಂಬರ್ 2019 (09:12 IST)
ಬೆಂಗಳೂರು: ಪೌರತ್ವ ತಿದ್ದುಪಡಿ ಖಾಯಿದೆಯಲ್ಲಿ ಮುಸ್ಲಿಮರನ್ನು ಹೊರಗಿಟ್ಟಿರುವುದಕ್ಕೆ ದೇಶದಲ್ಲಿ ಪ್ರತಿಭಟನೆಯ ಕಾವೇರುತ್ತಿದ್ದರೆ, ಇತ್ತ ಪ್ರಜಾಕೀಯ ಸಂಸ್ಥಾಪಕ, ರಿಯಲ್ ಸ್ಟಾರ್ ಉಪೇಂದ್ರ ತಮ್ಮದೇ ರೀತಿಯಲ್ಲಿ ಇದಕ್ಕೆ ವ್ಯಾಖ‍್ಯಾನ ನೀಡಿದ್ದಾರೆ.


ಮೊನ್ನೆಯಷ್ಟೇ ಹೈದರಾಬಾದ್ ಎನ್ ಕೌಂಟರ್ ಬಗ್ಗೆ ಪ್ರಶ್ನಿಸಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಕೆಂಗಣ್ಣಿಗೆ ಗುರಿಯಾಗಿದ್ದ ಉಪೇಂದ್ರ ಇಂದು ಪೌರತ್ವ ತಿದ್ದುಪಡಿ ಬಗ್ಗೆ ಪರೋಕ್ಷವಾಗಿ ರಾಜಕೀಯ ಪಕ್ಷಗಳಿಗೆ ಛಾಟಿ ಬೀಸಿದ್ದಾರೆ.

‘ಒಂದು ಪಕ್ಷಕಕ್ಕೆ ಒಂದು ಧರ್ಮ ಓಟ್ ಬ್ಯಾಂಕ್, ಇನ್ನೊಂದು ಪಕ್ಷಕ್ಕೆ ಇನ್ನೊಂದು ಧರ್ಮ ಓಟ್ ಬ್ಯಾಂಕ್. ಈ 20% ರಾಜರ ಗಲಾಟೆಯಲ್ಲಿ 80% ಜನ ಶಿಕ್ಷಣ, ಆರೋಗ್ಯ, ಉದ್ಯೋಗ ಇವುಗಳನ್ನು ಓಟ್ ಬ್ಯಾಂಕ್ ಮಾಡಿಕೊಳ್ಳುವ ವಿಚಾರ ಮಾಡಲೇ ಇಲ್ಲ. ಯಾಕೆಂದರೆ ನಮಗೆ ವಿವೇಚನೆಗಿಂತ ಆವೇಶವೇ ಮುಖ್ಯ. ವಿಚಾರಗಳು ಬೋರಿಂಗ್. ಆವೇಶ ಥ್ರಿಲ್ಲಿಂಗ್’ ಎಂದು ಉಪೇಂದ್ರ ಸಾಮಾಜಿಕ ಜಾಲತಾಣ ಪುಟದಲ್ಲಿ ಬರೆದುಕೊಂಡಿದ್ದಾರೆ.

ಅಷ್ಟೇ ಅಲ್ಲ ಮತ್ತೊಂದು ಸಂದೇಶ ಬರೆದುಕೊಂಡಿದ್ದು, ಸಿಎಎಯನ್ನು ಗಂಭೀರವಾಗಿ ಪರಿಗಣಿಸದಿರಿ. ಇದು ಇನ್ನು ಒಂದು ವಾರ ಜನರಿಗೆ, ಸಾಮಾಜಿಕ ಜಾಲತಾಣಗಳಿಗೆ, ಮಾಧ‍್ಯಮಗಳಿಗೆ ಆಹಾರ ಹಾಹಾಕಾರ ಸಿಕ್ಕಾಯ್ತು. ಹೊಟ್ಟೆಗೆ ಹಿಟ್ಟು ಇಲ್ದೇ ಇದ್ರೂ ಜುಟ್ಟಿಗೆ ಮಲ್ಲಿಗೆ ಹೂ ಇಡೋ ಕೆಲಸ ಸಿಕ್ತು. ಶಬಾಸ್ ರಾಜಕೀಯ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments