Webdunia - Bharat's app for daily news and videos

Install App

ಏನೇ ಆದ್ರೂ ಪತಿ ದರ್ಶನ್ ಕೈ ಬಿಡುವವರಲ್ಲ ವಿಜಯಲಕ್ಷ್ಮಿ ಎನ್ನುವುದಕ್ಕೆ ಇದೇ ಸಾಕ್ಷಿ

Krishnaveni K
ಮಂಗಳವಾರ, 17 ಸೆಪ್ಟಂಬರ್ 2024 (10:42 IST)
ಬಳ್ಳಾರಿ: ಪತಿ ದರ್ಶನ್ ಇನ್ನೊಬ್ಬ ಹೆಣ್ಣಿನ ಸಹವಾಸ ಮಾಡಿ ಆಕೆಗಾಗಿ ಹತ್ಯೆ ಮಾಡಿ ಜೈಲು ಸೇರಿದ್ದರೂ ಕೈ ಹಿಡಿದ ಪತ್ನಿ ವಿಜಯಲಕ್ಷ್ಮಿ ಮಾತ್ರ ಯಾವತ್ತೂ ಗಂಡನ ಕೈ ಬಿಡಲಿಲ್ಲ. ಇಂದು ಮತ್ತೊಮ್ಮೆ ಅದು ಸಾಬೀತಾಗುತ್ತಿದೆ.

ಇಂದು ನಟ ದರ್ಶನ್ ಆಂಡ್ ಗ್ಯಾಂಗ್ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾಗುತ್ತಿದ್ದು ಮತ್ತೊಮ್ಮೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ತಾವಿರುವ ಜೈಲಿನಿಂದಲೇ ಎಲ್ಲಾ ಆರೋಪಿಗಳೂ ನ್ಯಾಯಾಧೀಶರ ಮುಂದೆ ಹಾಜರಾಗಲಿದ್ದಾರೆ. ಇದಾದ ಬಳಿಕ ಎಲ್ಲಾ ಆರೋಪಿಗಳೂ ಜಾಮೀನಿಗೆ ಅರ್ಜಿ ಸಲ್ಲಿಸುವ ಬಗ್ಗೆ ಚಿಂತನೆ ನಡೆಸಲಿದ್ದಾರೆ.

ತನ್ನ ಪತಿಯ ಬಿಡುಗಡೆಯಾಗಿ ಶತಾಯ ಗತಾಯ ಪ್ರಯತ್ನ ನಡೆಸುತ್ತಿರುವ ವಿಜಯಲಕ್ಷ್ಮಿ ಈಗಾಗಲೇ ದೇವರ ಮೊರೆ ಹೋಗಿದ್ದಾಗಿದೆ. ಹಲವು ಪ್ರಭಾವಿಗಳನ್ನು ಭೇಟಿ ಮಾಡಿದ್ದಾರೆ. ಪತಿಯನ್ನು ಬಳ್ಳಾರಿ ಜೈಲಿನಲ್ಲಿಟ್ಟರೂ ಪ್ರತೀ ವಾರ ವಕೀಲರ ಜೊತೆ ಬಂದು ಮುಂದಿನ ಕಾನೂನು ಪ್ರಕ್ರಿಯೆಗಳ ಬಗ್ಗೆ ಮಾತುಕತೆ ನಡೆಸುತ್ತಿದ್ದಾರೆ.

ಇಂದೂ ವಿಜಯಲಕ್ಷ್ಮಿ ಪತಿಯ ಭೇಟಿಗಾಗಿ ಬಳ್ಳಾರಿಗೆ ಬರಲಿದ್ದಾರೆ. ಬೆಂಗಳೂರಿನಿಂದ ಬಳ್ಳಾರಿಗೆ ಸುಮಾರು 5-6 ಗಂಟೆ ದಾರಿಯಿದೆ. ಹಾಗಿದ್ದರೂ ವಿಜಯಲಕ್ಷ್ಮಿ ಪ್ರತೀ ವಾರ ತಪ್ಪದೇ ಪತಿಯನ್ನು ಭೇಟಿ ಮಾಡುತ್ತಿದ್ದಾರೆ. ಇಂದು ನ್ಯಾಯಾಲಯದ ಕಲಾಪಗಳು ಮುಗಿದ ನಂತರ ವಿಜಯಲಕ್ಷ್ಮಿ ಭೇಟಿ ನೀಡಲಿದ್ದಾರೆ. ಈ ವೇಳೆ ಜಾಮೀನಿಗೆ ಅರ್ಜಿ ಸಲ್ಲಿಸುವ ಸಂಬಂಧ ದರ್ಶನ್ ಜೊತೆ ಚರ್ಚೆ ನಡೆಸಲಿದ್ದಾರೆ. ಅವರಿಗೆ ದರ್ಶನ್ ಸಹೋದರ ದಿನಕರ್ ಕೂಡಾ ಸಾಥ್ ನೀಡುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

ಮುಂದಿನ ಸುದ್ದಿ