Webdunia - Bharat's app for daily news and videos

Install App

ಮಧ್ಯಂತರ ಜಾಮೀನು ಸಿಕ್ಕರೆ ದರ್ಶನ್ ಶೂಟಿಂಗ್ ನಲ್ಲಿ ಭಾಗಿಯಾಗಬಹುದೇ ಇಲ್ಲಿದೆ ಉತ್ತರ

Krishnaveni K
ಬುಧವಾರ, 30 ಅಕ್ಟೋಬರ್ 2024 (08:51 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಗೆ ಇಂದು ಮಧ್ಯಂತರ ಜಾಮೀನು ಸಿಗುವ ನಿರೀಕ್ಷೆಯಿದೆ. ಆದರೆ ಮಧ್ಯಂತರ ಜಾಮೀನು ಸಿಕ್ಕರೆ ದರ್ಶನ್ ಏನೆಲ್ಲಾ ಮಾಡಬಹುದು, ಏನು ಮಾಡಬಾರದು ಇಲ್ಲಿದೆ ವಿವರ.

ಮುಖ್ಯವಾಗಿ ದರ್ಶನ್ ನಂಬಿಕೊಂಡು ಬಂಡವಾಳ ಹೂಡಿರುವ ನಿರ್ಮಾಪಕರಿಗೆ ಈಗ ತಮ್ಮ ಸಿನಿಮಾ ಮುಗಿಸುವುದೇ ಚಿಂತೆಯಾಗಿದೆ. ಆದರೆ ಮಧ್ಯಂತರ ಜಾಮೀನು ಸಿಕ್ಕರೆ ದರ್ಶನ್ ಶೂಟಿಂಗ್ ನಲ್ಲಿ ಭಾಗಿಯಾಗಬಹುದೇ ಎಂಬ ಉತ್ತರಗಳಿಗೆ ಇಂದು ಕೋರ್ಟ್ ನೀಡುವ ಕಾರಣಗಳು ಮುಖ್ಯವಾಗಲಿದೆ.

ದರ್ಶನ್ ಅನಾರೋಗ್ಯದ ನೆಪವೊಡ್ಡಿ ಈಗ ಮಧ್ಯಂತರ ಜಾಮೀನಾದರೂ ನೀಡಿ ಎಂದು ಅವರ ಪರ ವಕೀಲರು ವಾದ ಮಂಡಿಸಿದ್ದರು. ಇದು ಪೂರ್ಣ ಪ್ರಮಾಣದ ಜಾಮೀನು ಆಗಿರಲ್ಲ. ಮಧ್ಯಂತರ ಜಾಮೀನು ಎಂದರೆ ಯಾವುದಾದರೂ ಉದ್ದೇಶಕ್ಕೆ ನೀಡುವುದಾಗಿರುತ್ತದೆ. ಇದೀಗ ದರ್ಶನ್ ಬೆನ್ನು ನೋವಿಗೆ ಶಸ್ತ್ರಚಿಕಿತ್ಸೆಯ ಅಗತ್ಯದ ಬಗ್ಗೆ ಹೇಳಿರುವುದರಿಂದ ಸದ್ಯಕ್ಕೆ ಶಸ್ತ್ರಚಿಕಿತ್ಸೆ ಮುಗಿಸಿ ಮತ್ತೆ ಕೋರ್ಟ್ ಗೆ ಶರಣಾಗಬೇಕಾದೀತು.

ಒಂದು ವೇಳೆ ಪೂರ್ಣಾವಧಿ ಜಾಮೀನು ಸಿಕ್ಕರೆ ದರ್ಶನ್ ಶೂಟಿಂಗ್ ನಲ್ಲಿ ಭಾಗಿಯಾಗಬಹುದು. ಆದರೆ ಮಧ್ಯಂತರ ಜಾಮೀನು ಎಂದರೆ ಕಾಲ ಕಾಲಕ್ಕೆ ಅವರು ಆರೋಗ್ಯದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುತ್ತಿರಬೇಕು. ತಮ್ಮ ಪಾಸ್ ಪೋರ್ಟ್ ಗಳನ್ನು ಸರೆಂಡರ್ ಮಾಡಬೇಕು. ಪೊಲೀಸರ ಅನುಮತಿ ಇಲ್ಲದೇ ನಗರ ಬಿಟ್ಟು ತೆರಳುವಂತಿಲ್ಲ. ನಿಯಮಿತವಾಗಿ ಪೊಲೀಸ್ ಠಾಣೆಗೆ ಬಂದು ಹಾಜರಾತಿ ಹಾಕುತ್ತಿರಬೇಕು. ಇನ್ನು, ಸಾಕ್ಷಿದಾರರನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಭೇಟಿ ಮಾಡಿ ಪ್ರಭಾವ ಬೀರುವಂತಿಲ್ಲ. ಈ ಅವಧಿಯಲ್ಲಿ ಅವರು ಯಾರಿಗೂ ಧಮ್ಕಿ ಹಾಕುವುದು ಅಥವಾ ಇದೀಗ ಆರೋಪಿಯಾಗಿರುವಂತಹದ್ದೇ ಪ್ರಕರಣದಲ್ಲಿ ಭಾಗಿಯಾಗುವಂತಿಲ್ಲ. ಇವಿಷ್ಟು ಷರತ್ತುಗಳ ಮೇಲೆಯೇ ಮಧ್ಯಂತರ ಜಾಮೀನು ನೀಡಲಾಗುತ್ತದೆ. ಶಸ್ತ್ರ ಚಿಕಿತ್ಸೆ ಮುಗಿದು ಗುಣಮುಖರಾದ ನಂತರ ತಕ್ಷಣವೇ ಅವರು ಕೋರ್ಟ್ ಮುಂದೆ ಶರಣಾಗಲು ಇಂದು ನ್ಯಾಯಾಧೀಶರು ಆದೇಶ ನೀಡುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

ಮುಂದಿನ ಸುದ್ದಿ
Show comments