Webdunia - Bharat's app for daily news and videos

Install App

ದರ್ಶನ್ ಗೆ ಚಾರ್ಜ್ ಶೀಟ್ ಢವ ಢವ: ಎ1 ಆದರೆ ದಾಸನ ಗತಿಯೇನು

Krishnaveni K
ಬುಧವಾರ, 4 ಸೆಪ್ಟಂಬರ್ 2024 (08:54 IST)
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಪ್ರಕರಣದಲ್ಲಿ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲು ರೆಡಿಯಾಗಿದ್ದಾರೆ. ಇದರಿಂದಾಗಿ ದರ್ಶನ್ ಗೆ ಈಗ ಢವ ಢವ ಶುರುವಾಗಿದೆ.

ಇದೀಗ ಈ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆಗಿದ್ದರೆ ದರ್ಶನ್ ಎ2 ಆಗಿದ್ದಾರೆ. ಇನ್ನುಳಿದ ಆರೋಪಿಗಳಿಗೆ ಅವರವರ ಸಹಭಾಗಿತ್ವಕ್ಕೆ ತಕ್ಕಂತೆ ಆರೋಪಿ ಸಂಖ್ಯೆ ನೀಡಲಾಗಿದೆ. ಆದರೆ ಇದೀಗ ಪೊಲೀಸರು ಸಮಗ್ರ ತನಿಖೆ ನಡೆಸಿದ ನಂತರ ಆರೋಪಿಗಳ ಸಂಖ್ಯೆ ಬದಲಾಗುವುದು ಖಂಡಿತ.

ಮೂಲಗಳ ಪ್ರಕಾರ ಈ ಕೊಲೆಯ ಸಂಚು ರೂಪಿಸಿದ ಪ್ರಮುಖ ರೂವಾರಿ ದರ್ಶನ್ ಎಂದು ಕಂಡುಬಂದಿದ್ದು, ಅವರೇ ಎ1 ಆಗುವ ಸಾಧ್ಯತೆಯಿದೆ. ದರ್ಶನ್ ಎ1 ಆದರೆ ಅವರ ಮುಂದಿನ ಗತಿಯೇನು ಎಂಬ ಪ್ರಶ್ನೆ ಮೂಡಿದೆ. ಎ1 ಆರೋಪಿಯಾದರೆ ಅವರಿಗೆ ಜಾಮೀನು ಸಿಗುವುದೂ ಕಷ್ಟವಾಗಲಿದೆ.

ಒಂದು ವೇಳೆ ಜಾಮೀನು ನೀಡಿದರೂ ಮುಂದೆ ಶಿಕ್ಷೆ ನೀಡುವ ಸಂದರ್ಭದಲ್ಲಿ ಅವರಿಗೆ ಗರಿಷ್ಠ ಶಿಕ್ಷೆಯಾಗಬಹುದಾಗಿದೆ. ಆದರೆ ಸದ್ಯಕ್ಕೆ ಪೊಲೀಸರು ಎ1 ಆರೋಪಿ ಯಾರಾಗಲಿದ್ದಾರೆ ಎಂಬ ಗುಟ್ಟು ಬಿಟ್ಟುಕೊಟ್ಟಿಲ್ಲ. ಈ ವಿಚಾರದಲ್ಲಿ ತಾನು ತಲೆ ಹಾಕುವುದಿಲ್ಲ ಎಂದು ಪೊಲೀಸ್ ಕಮಿಷನರ್ ಬಿ ದಯಾನಂದ್ ಈಗಾಗಲೇ ಹೇಳಿದ್ದಾರೆ. ಆದರೆ ದರ್ಶನ್ ವಿರುದ್ಧ ಸಿಕ್ಕಿರುವ ಸಾಕ್ಷ್ಯಗಳನ್ನು ಗಮನಿಸಿದರೆ ಅವರೇ ಎ1 ಆಗುವ ದಟ್ಟ ಸಾಧ್ಯತೆಗಳಿವೆ. ಚಾರ್ಜ್ ಶೀಟ್ ಸಲ್ಲಿಕೆ ಬಳಿಕವಷ್ಟೇ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಸಬಹುದು. ಆದರೆ ಅವರು ಎ1 ಆದರೆ ಅವರಿಗೆ ಜಾಮೀನು ಸಿಗುವುದು ಕಷ್ಟವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments