Webdunia - Bharat's app for daily news and videos

Install App

ಎಲ್ರೂ ಬಂದಾಯ್ತು, ದರ್ಶನ್ ನೋಡಲು ಸುಮಲತಾ ಕೂಡಾ ಬರ್ತಾರಾ

Krishnaveni K
ಶುಕ್ರವಾರ, 26 ಜುಲೈ 2024 (09:26 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ರನ್ನು ನೋಡಲು ಈಗಾಗಲೇ ಹಲವು ಆಪ್ತರು ಬಂದು ಹೋಗಿದ್ದಾರೆ. ಇದೀಗ ಸುಮಲತಾ ಕೂಡಾ ಬರಲಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ.

ನಟ ದರ್ಶನ್ ಆಪ್ತ ವಲಯದಲ್ಲಿ ಕಾಣಿಸಿಕೊಂಡಿದ್ದ ರಕ್ಷಿತಾ ಪ್ರೇಮ್, ಪ್ರೇಮ್, ಧನ್ವೀರ್ ಗೌಡ, ತರುಣ್ ಸುಧೀರ್, ಸಾಧು ಕೋಕಿಲ, ವಿನೋದ್ ರಾಜ್ ಸೇರಿದಂತೆ ಅನೇಕರು ಈಗಾಗಲೇ ಅನೇಕರು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಹೋಗಿದ್ದಾರೆ. ಅವರ ಜೊತೆಗೆ ರಾಜಕೀಯ ಕ್ಷೇತ್ರದ ಅವರ ಆಪ್ತರೂ ಬಂದು ಹೋಗಿದ್ದಾರೆ.

ನಿನ್ನೆಯಷ್ಟೇ ಬಿಜೆಪಿ ನಾಯಕ ಸಚ್ಚಿದಾನಂದ ದರ್ಶನ್ ರನ್ನು ಭೇಟಿ ಮಾಡಿದ್ದಾರೆ. ಇದೀಗ ಸುಮಲತಾ ಕೂಡಾ ಮುಂದೆ ದರ್ಶನ್ ಭೇಟಿಗೆ ಬರಬಹುದೇ ಎಂದು ಮಾಧ್ಯಮಗಳು ಅವರನ್ನು ಪ್ರಶ್ನೆ ಮಾಡಿವೆ. ಈ ವೇಳೆ ಮಾತನಾಡಿದ ಅವರು ಯಾರೇ ಆಗಲಿ ಜೈಲಿನಲ್ಲಿ ಅವರನ್ನು ನೋಡಲು ಕಷ್ಟವಾಗುತ್ತದೆ. ಹೀಗಾಗಿ ಸುಮಲತಾ ಮೇಡಂ ಬಂದರೂ ಬರಬಹುದು, ಬರದೆಯೂ ಇರಬಹುದು ಎಂದಿದ್ದಾರೆ.

ದರ್ಶನ್ ಬಂಧನದ ಬಳಿಕ ಸುಮಲತಾ ಸಾರ್ವಜನಿಕವಾಗಿ ಒಮ್ಮೆ ಮಾತ್ರ ಕಾಣಿಸಿಕೊಂಡಿದ್ದರು. ದರ್ಶನ್ ವಿಚಾರವಾಗಿ ಮಾತನಾಡಿಲ್ಲ ಎಂದು ಟೀಕೆಗೊಳಗಾದ ನಂತರ ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘ ಪೋಸ್ಟ್ ಹಾಕಿ ಟೀಕಾಕಾರರಿಗೆ ತಿರುಗೇಟು ನೀಡಿದ್ದರು. ಅಲ್ಲದೆ, ದರ್ಶನ್ ಕುಟುಂಬದ ಜೊತೆಗೆ ಸಂಪರ್ಕದಲ್ಲಿರುವುದಾಗಿ ಹೇಳಿದ್ದರು. ದರ್ಶನ್ ಯಾವತ್ತಿದ್ದರೂ ನನ್ನ ದೊಡ್ಡ ಮಗನೇ ಎಂದಿದ್ದರು. ಇದೀಗ ದರ್ಶನ್ ರನ್ನು ನೋಡಲು ಸುಮಲತಾ ಜೈಲಿಗೆ ಹೋಗಲಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

ಮುಂದಿನ ಸುದ್ದಿ
Show comments