Webdunia - Bharat's app for daily news and videos

Install App

Prithvi Bhat marriage Audio viral: ಮನೆ ಬಿಟ್ಟು ಓಡಿ ಹೋಗಿ ಮದುವೆಯಾದ ಗಾಯಕಿ ಪೃಥ್ವಿ ಭಟ್: ಮನೆಯವರಿಂದ ಗಂಭೀರ ಆರೋಪ

Krishnaveni K
ಸೋಮವಾರ, 21 ಏಪ್ರಿಲ್ 2025 (11:22 IST)
Photo Credit: X
ಬೆಂಗಳೂರು: ಜೀ ಕನ್ನಡ ಸರಿಗಮಪ ಖ್ಯಾತಿಯ ಗಾಯಕಿ ಪೃಥ್ವಿ ಭಟ್ ಮನೆಯವರನ್ನೂ ಲೆಕ್ಕಿಸದೇ ಮದುವೆಯಾಗಿದ್ದು, ಮಗಳ ಮದುವೆ ಬಗ್ಗೆ ಮನೆಯವರು ಗಂಭೀರ ಆರೋಪ ಮಾಡಿದ್ದಾರೆ.

ಗಡಿನಾಡು ಕಾಸರಗೋಡು ಮೂಲದವರಾದ ಪೃಥ್ವಿ ಭಟ್ ಜೀ ಕನ್ನಡದ ಸರಿಗಮಪ ರಿಯಾಲಿಟಿ ಶೋ ಮೂಲಕ ಬೆಳಕಿಗೆ ಬಂದ ಪ್ರತಿಭೆ. ಸಾಕಷ್ಟು ಸ್ಟೇಜ್ ಶೋ, ಕನ್ನಡ ಸಿನಿಮಾಗಳಿಗೂ ಹಾಡಿರುವ ಪೃಥ್ವಿ ಭಟ್ ಈಗ ದಿಡೀರ್ ಆಗಿ ಮದುವೆಯಾಗಿದ್ದಾರೆ.

ಅಭಿಷೇಕ್ ಎನ್ನುವ ಯುವಕನೊಂದಿಗೆ ಪೃಥ್ವಿ ಭಟ್ ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಮಗಳ ಮದುವೆ ವಿಚಾರ ತಿಳಿದು ಪೋಷಕರು ಆಘಾತ ವ್ಯಕ್ತಪಡಿಸಿದ್ದಾರೆ. ತಮ್ಮ ಮಾತನ್ನು ಧಿಕ್ಕರಿಸಿ ಮಗಳು ಮದುವೆಯಾಗಿದ್ದಾಳೆ. ಆ ಹುಡುಗನ ಜೊತೆ ಮದುವೆಯಾಗುವುದಿಲ್ಲ ಎಂದು ದೇವರ ಮುಂದೆ ನಿಂತು ಪ್ರಮಾಣ ಮಾಡಿದ್ದಳು.ಆದರೆ ಇದ್ದಕ್ಕಿದ್ದಂತೆ ಮನೆ ಬಿಟ್ಟು ಓಡಿ ಹೋಗಿದ್ದಾಳೆ. ಮಗಳ ಮೇಲೆ ವಶೀಕರಣ ವಿದ್ಯೆ ಪ್ರಯೋಗಿಸಲಾಗಿದೆ. ಇದರ ಹಿಂದೆ ಜೀ ಕನ್ನಡ ರಿಯಾಲಿಟಿ ಜ್ಯೂರಿ ನರಹರಿ ದೀಕ್ಷಿತ್ ಕೈವಾಡವಿದೆ ಎಂದು ಆರೋಪಿಸಿದ್ದಾರೆ.

ಅಭಿಷೇಕ್ ಕೂಡಾ ಜೀ ಕನ್ನಡದಲ್ಲಿ ನೌಕರ. ಮಾರ್ಚ್ 27 ರಂದು ಇಬ್ಬರ ಮದುವೆಯಾಗಿದೆ. ಮದುವೆಯಾಗಿ 20 ದಿನಗಳಾಗಿದೆ. ಇದುವರೆಗೆ ಅವಳಿಗೆ ನಮ್ಮನ್ನು ನೆನಪಾಗಲಿಲ್ಲ. ರೆಕಾರ್ಡಿಂಗ್ ಗೆ ಅಂತ ನಾನೇ ಸ್ಟುಡಿಯೋಗೆ ಬಿಟ್ಟು ಬಂದಿದ್ದೆ. ಆವತ್ತು ಮಧ್ಯಾಹ್ನ ಮೇಲೆ ನಮಗೆ ಪೊಲೀಸರು ಕಾಲ್ ಮಾಡಿ ಹೇಳಿದ್ರು ಪೃಥ್ವಿ ಭಟ್ ನಿಮ್ಮ ಮಗಳಾ? ಅವಳು ಹೀಗೆ ಅಭಿಷೇಕ್ ಎನ್ನುವವರನ್ನು ಮದುವೆಯಾಗಿ ಇಲ್ಲಿಗೆ ಬಂದಿದ್ದಾರೆ. ನಿಮ್ಮ ಮನೆಗೆ ಬರ್ತಾರಂತೆ ಅಂತ ಹೇಳಿದ್ರು. ಆಗ ನಾವು ಮನೆಗೆ ಬರುವುದು ಬೇಡ. ಇಲ್ಲಿಗೆ ಬಂದರೆ ಗಲಾಟೆಯಾಗುತ್ತದೆ ಎಂದೆವು, ಅದಾದ ಬಳಿಕ ಒಂದೆರಡು ಸಲ ಕಾಲ್ ಮಾಡಿ ಸಾರಿ ಅಪ್ಪ, ಅಮ್ಮ ಎಂದು ಹೇಳಿದ್ದಳು. ಅದರ ಬಿಟ್ಟರೆ ನಮ್ಮ ಸಂಪರ್ಕದಲ್ಲಿಲ್ಲ ಎಂದು ಪೃಥ್ವಿ ಭಟ್ ಹೇಳಿರುವ ಅಡಿಯೋ ಈಗ ವೈರಲ್ ಆಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ವಿರೋದಿ ಹೇಳಿಕೆ, ಮಲಯಾಳಂ ನಟ ಅಖಿಲ್ ಮಾರಾರ್‌ ವಿರುದ್ಧ ಜಾಮೀನು ರಹಿತ ದೂರು ದಾಖಲು

Rakesh Poojari: ರಾಕೇಶ್ ಪೂಜಾರಿ ತಂಗಿಗಾಗಿ ಕಾಮಿಡಿ ಕಿಲಾಡಿಗಳು ಟೀಂನಿಂದ ದೊಡ್ಡ ನಿರ್ಧಾರ

ಹೃದಯ ಶ್ರೀಮಂತನಿಗೆ ಹೃದಯಾಘಾತವೇ: ರಾಕೇಶ್‌ ಅಗಲಿಕೆಗೆ ಸ್ನೇಹಿತೆ ನಯನ ಕಂಬನಿ ನುಡಿಗಳು

Rakesh Poojary No More: ರಾಕೇಶ್‌ಗೆ ಅಂತಿಮ ನಮನ ಸಲ್ಲಿಸಿ, ಅಳುತ್ತಲೇ ಕೂತಾ ರಕ್ಷಿತಾ ಪ್ರೇಮ್‌, ಅನುಶ್ರೀ, ಕಿರುತೆರೆ ಕಲಾವಿದರು

ಬಾಹುಬಲಿ, ಕೆಜಿಎಫ್ ಅಂತಹ ಪ್ಯಾನ್‌ ಇಂಡಿಯಾ ಸಿನಿಮಾ ಬಗ್ಗೆ ನಿರ್ಮಾಪಕ ಅನುರಾಗ್ ಕಶ್ಯಪ್ ಟೀಕೆ

ಮುಂದಿನ ಸುದ್ದಿ
Show comments