Select Your Language

Notifications

webdunia
webdunia
webdunia
webdunia

ದಾಖಲೆ ಇಲ್ಲದ 1.5 ಕೋಟಿ ವಶಕ್ಕೆ

ದಾಖಲೆ ಇಲ್ಲದ 1.5 ಕೋಟಿ ವಶಕ್ಕೆ
ಕರ್ನಾಟಕದಲ್ಲಿ ದಿನೇದಿನೇ ಚುನಾವಣಾ ಕಾವು ಹೆಚ್ಚಾಗುತ್ತಿದ್ದು, ಚುನಾವಣಾ ನೀತಿ ಸಂಹಿತೆ ಹಿನ್ನಲೆ ಚೆಕ್‌ಪೋಸ್ಟ್‌ಗಳಲ್ಲಿ ತೀವ್ರ ತಪಾಸಣೆ ನಡೆಸುತ್ತಿದ್ದು, ಚೆಕ್​ಪೋಸ್ಟ್​ಗಳಲ್ಲಿ ಓಡಾಡುವ ವಾಹನಗಳ ಮೇಲೆ ಚುನಾವಣಾಧಿಕಾರಿಗಳು ಕಣ್ಣಿಟ್ಟಿದ್ದಾರೆ. ರಾಮನಗರದ ಗಂಟಕನದೊಡ್ಡಿ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದ 1.5 ಕೋಟಿ ವಶಕ್ಕೆ ಪಡೆದಿದ್ದಾರೆ. ATMಗೆ ಹಣ ಸಾಗಿಸುವ ವಾಹನದಲ್ಲಿ ಹಣವನ್ನು ತೆಗೆದುಕೊಂಡು‌ ಹೋಗುತ್ತಿದ್ದರು. ಈ ವೇಳೆ ರಾಮನಗರ ಎಸ್‌ಪಿ ಕಾರ್ತಿಕ್‌, ಚುನಾವಣಾಧಿಕಾರಿ ಅವಿನಾಶ್‌ ನೇತೃತ್ವದಲ್ಲಿ ದಾಳಿ ನಡೆದಿದ್ದು, ಸೂಕ್ತ ದಾಖಲೆ ಇಲ್ಲದ ಕಾರಣ ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಈ ಸಂಬಂಧ ಹಾರೋಹಳ್ಳಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೋಟಿ ಕೋಟಿ ಒಡತಿ ಅರುಣಾ `ಲಕ್ಷ್ಮಿ'