Publish Date: Thu, 20 Jul 2023 (11:28 IST)
Updated Date: Thu, 20 Jul 2023 (11:29 IST)
ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರಿಂದ ಭಾರೀ ಹೈಡ್ರಾಮಾ ನಡೆದಿದ್ದು, ಸ್ಪೀಕರ್ ಪೀಠವನ್ನು ಅಲಂಕರಿಸಿದ್ದ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಮೇಲೆ ವಿಧೇಯಕ ಪ್ರತಿಯನ್ನು ಹರಿದು ಬಿಸಾಡಿದ ಪ್ರಸಂಗ ನಡೆಯಿತು.
ಇದೀಗ ಸದನದಲ್ಲಿ ಭಾರೀ ಗದ್ದಲ ನಡೆದ ಹಿನ್ನೆಲೆ ಬಿಜೆಪಿಯ 10 ಸದಸ್ಯರನ್ನು ಸ್ಪೀಕರ್ ಅಮಾನತುಗೊಳಿಸಿದ್ದಾರೆ. ಸಸ್ಪೆಂಡ್ ಆದ ಸದಸ್ಯರನ್ನು ಮಾರ್ಷಲ್ಗಳು ವಿಧಾನಸಭೆಯಿಂದ ಹೊರಹಾಕಿದ್ದಾರೆ.