Webdunia - Bharat's app for daily news and videos

Install App

ಸಿಎಂ ಕುಮಾರಸ್ವಾಮಿ ಒಂದು ದಿನದ ಕೊಡಗು ಭೇಟಿಗೆ 100 ಮರಗಳು ಉರುಳಿತು!

Webdunia
ಶುಕ್ರವಾರ, 20 ಜುಲೈ 2018 (10:03 IST)
ಕೊಡಗು: ಸಿಎಂ ಕುಮಾರಸ್ವಾಮಿ ನಿನ್ನೆ ಕೊಡಗು ಜಿಲ್ಲೆಗೆ ಭೇಟಿ ಇತ್ತು ಹಲವು ಸಭೆ, ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಆದರೆ ಸಿಎಂ ಒಂದು ದಿನದ ಭೇಟಿಯ ಬೆಲೆ ಎಷ್ಟು ಗೊತ್ತಾ?!

ಸಿಎಂ ಒಂದು ದಿನದ ಭೇಟಿಗಾಗಿ ಜಿಲ್ಲಾಡಳಿತ ಅರಣ್ಯ ಇಲಾಖೆಗೆ ಮಾಹಿತಿ ನೀಡದೇ ಸುಮಾರು 100 ಮರಗಳನ್ನು ಕಡಿದು ಹಾಕಿದೆಯಂತೆ! ಎಲ್ಲವೂ ಸಿಎಂ ಸುರಕ್ಷತೆ ದೃಷ್ಟಿಯಿಂದ ಎಂದು ಇದಕ್ಕೆ ಸಮಜಾಯಿಷಿ ಕೊಡಲಾಗಿದೆ.

ಅಪಾಯಕಾರಿ ಮರಗಳನ್ನು ಕಡಿಯುವ ಮೊದಲು ನಮಗೆ ಯಾವುದೇ ಸೂಚನೆ ಕೊಟ್ಟಿಲ್ಲ. ನಾವು ಮಳೆ, ಗಾಳಿಯಿಂದ ಮರಗಳು ಬಿದ್ದಿರಬಹುದು ಎಂದು ಅಂದುಕೊಂಡಿದ್ದೆವು ಎಂದು ಅರಣ್ಯ ಇಲಾಖೆ ಮೂಲಗಳು ಹೇಳಿವೆ.

ಆದರೆ ಇದಕ್ಕೆ ಸಮಜಾಯಿಷಿ ನೀಡಿರುವ ಜಿಲ್ಲಾಧಿಕಾರಿ ನಾವು ಅಪಾಯಕಾರಿ ಟೊಂಗೆಗಳನ್ನು ಕಡಿಯಲು ಸೂಚಿಸಿದ್ದೆವಷ್ಟೇ. ಆದರೆ ನಮ್ಮ ಆದೇಶವನ್ನು ತಪ್ಪಾಗಿ ಗ್ರಹಿಸಿ ಮರಗಳನ್ನು ಕತ್ತರಿಸಲಾಗಿದೆ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

ಸ್ಪಷ್ಟನೆಗಳು ಏನೇ ಇದ್ದರೂ ರಾಜ್ಯದ ಮುಖ್ಯಮಂತ್ರಿ ಭೇಟಿ ನೆಪದಲ್ಲಿ ಹಸಿರಿಗೆ ಹೆಸರಾಗಿರುವ ಕೊಡಗಿನಲ್ಲಿ ಅದೆಷ್ಟೋ ಮರಗಳಿಗೆ ಕತ್ತರಿ ಹಾಕಿದ್ದು ಎಷ್ಟು ಸರಿ?

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

ಮುಂದಿನ ಸುದ್ದಿ
Show comments