ಮಾಡಬಾರದ್ದನ್ನು ಮಾಡಿದ 12 ಪೊಲೀಸರು ಸಸ್ಪೆಂಡ್

Webdunia
ಭಾನುವಾರ, 6 ಅಕ್ಟೋಬರ್ 2019 (12:09 IST)
ಒಂದು ಡಜನ್ ಪೊಲೀಸರು ಮಾಡಬಾರದ ಕೆಲಸ ಮಾಡಿ ಸಸ್ಪೆಂಡ್ ಆಗಿದ್ದಾರೆ.   

ಕರ್ತವ್ಯಲೋಪ, ತನಿಖೆಯಲ್ಲಿ ನಿಷ್ಕಾಳಜಿ, ಅಕ್ರಮ ಚಟುವಟಿಕೆ ಮತ್ತು ವ್ಯಾಜ್ಯಗಳಲ್ಲಿ ಭಾಗಿ ಸೇರಿದಂತೆ ಹಲವು ವಿಚಾರಗಳಲ್ಲಿ ಭಾಗಿಯಾಗಿದ್ದ ಆರೋಪದಡಿ 12 ಪೊಲೀಸರನ್ನು ಸಸ್ಪೆಂಡ್ ಮಾಡಲಾಗಿದೆ. ಹುಬ್ಬಳ್ಳಿ – ಧಾರವಾಡ ಕಮಿಷ್ನರೇಟ್‌ ಘಟಕ ವ್ಯಾಪ್ತಿಯ 12 ಜನ ಪೊಲೀಸ್‌ ಸಿಬ್ಬಂದಿಯನ್ನು ಅಮಾನತು ಗೊಳಿಸಲಾಗಿದೆ ಅಂತ ಪೊಲೀಸ್‌ ಆಯುಕ್ತ ಆರ್‌. ದಿಲೀಪ್‌ ತಿಳಿಸಿದ್ದಾರೆ.

ಈ ವರ್ತನೆ ತೋರಿದ ಸಿಬ್ಬಂದಿ ವಿರುದ್ಧ ಡಿಸಿಪಿ ಮತ್ತು ಎಸಿಪಿಗಳು ತನಿಖೆ ನಡೆಸಿ ವರದಿ ನೀಡಿದ್ದಾರೆ. ಇದರ ಆಧಾರದ ಮೇಲೆ ಧಾರವಾಡದಲ್ಲಿ ನಡೆದ ಚಾಕು ಇರಿತ ಮತ್ತು ಇತರೆ ಪ್ರಕರಣಗಳಿಗೆ ಸಬಂಧಿಸಿದಂತೆ 6 ಜನ ಪೊಲೀಸ್‌ರನ್ನು ಅಮಾನತುಗೊಳಿಸಲಾಗಿದೆ.

ಅದರಂತೆ ಹುಬ್ಬಳ್ಳಿಯಲ್ಲಿ ಗಣೇಶ ವಿಸರ್ಜನೆ ಸಂದರ್ಭ ಮತ್ತು ಇತರೆ ಅಕ್ರಮ ಚಟುವಟಿಕೆ ನಡೆಸುವವರೊಂದಿಗೆ ಸಂಪರ್ಕ ಹೊಂದಿದ್ದ 6 ಜನ ಪೊಲೀಸ್‌ ಸಿಬ್ಬಂದಿ ಅಮಾನತುಗೊಳಿಸಲಾಗಿದೆ ಎಂದಿದ್ದಾರೆ.  

ಶೋಕಾಸ್‌ ನೋಟಿಸ್‌ : ರೌಡಿಶೀಟರ್‌ಗಳ ಜತೆ ನಿಕಟ ಸಂಪರ್ಕ ಹೊಂದಿದ್ದ ಎಎಸ್‌ಐ, ಪಿಎಸ್‌ಐ ಹಾಗೂ ಕೆಲ ಸಿಬ್ಬಂದಿಗೆ ಶೋಕಾಸ್‌ ನೋಟಿಸ್‌ ನೀಡಲಾಗಿದೆ.




ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈಲಿನಲ್ಲಿ ಚುಡಾಯಿಸಿದ್ದಕ್ಕೆ ಯುವಕನಿಗೆ ಯುವತಿ ಮಾಡಿದ ಕೆಲಸ ನೋಡಿದ್ರೆ ನಿಜಕ್ಕೂ ಶಾಕ್ ಆಗ್ತೀರಿ video

ತಿರುವನಂತಪುರಂ ಹೋಟೆಲ್ ಲಿಫ್ಟ್ನಲ್ಲಿ ಸಿಲುಕಿದ ಶಶಿ ತರೂರ್: ರಕ್ಷಿಸಿದ ಅಗ್ನಿಶಾಮಕ ದಳದವರಿಗೆ ಕೊನೆಗೆ ಏನು ಮಾಡಿದ್ರು ಗೊತ್ತಾ Video

Karnataka Weather: ರಾಜ್ಯದ ಈ ಜಿಲ್ಲೆಗಳಿಗೆ ಇಂದು ಭಾರೀ ಮಳೆ ನಿರೀಕ್ಷೆ

ಡಿಸೆಂಬರ್‌ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ: ಡಿಕೆ ಶಿವಕುಮಾರ್‌

ಹೊಸರಿತ್ತಿ ಮೂಲ ಬೃಂದಾವನಕ್ಕೆ ಸುವರ್ಣ ಕವಚ ಅರ್ಪಣೆ

ಮುಂದಿನ ಸುದ್ದಿ
Show comments