12 ವರ್ಷಗಳ ಹಿಂದಿನ ಕೊಲೆ ಕೇಸ್ ಜೀವಂತ..!

Webdunia
ಶುಕ್ರವಾರ, 4 ಫೆಬ್ರವರಿ 2022 (14:59 IST)
ಬಳ್ಳಾರಿ : ಜಿಲ್ಲೆಯಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದ್ದ ನಗರಸಭೆ ಸದಸ್ಯೆ ಜಿ. ಪದ್ಮಾವತಿ ಯಾದವ್ ಕೊಲೆ ಪ್ರಕರಣ ಸಂಭವಿಸಿ 12 ವರ್ಷಗಳಾದರೂ ಆರೋಪಿಗಳು ಪತ್ತೆಯಾಗಿಲ್ಲ.
 
ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂಬ ಅರ್ಜಿ ಹೈಕೋರ್ಟ್ನಲ್ಲಿ ವಿಚಾರಣೆ ಹಂತದಲ್ಲಿದ್ದರೆ, ಇನ್ನೊಂದೆಡೆ ದೂರುದಾರರು ಕೇಂದ್ರ ಸರಕಾರಕ್ಕೂ ಮನವಿ ಸಲ್ಲಿಸಲು ಮುಂದಾಗಿರುವುದು ಸಂಚಲನ ಮೂಡಿಸಿದೆ.

2010 ಫೆಬ್ರುವರಿ 04ರಂದು ಪದ್ಮಾವತಿ ಅವರ ಕೊಲೆಯಾಗಿತ್ತು. ಸದ್ಯ ಈ ಪ್ರಕರಣ ನಡೆದು 12 ವರ್ಷಗಳು ಕಳೆದಿದ್ದರೂ ಈವರೆಗೂ ಆರೋಪಿಗಳು ಪತ್ತೆಯಾಗಿಲ್ಲ. ಪ್ರಕರಣದ ತನಿಖೆ ಸಮರ್ಪಕವಾಗಿ ನಡೆಸಲು ಸಿಬಿಐಗೆ ವಹಿಸುವಂತೆ ಮೃತ ಪದ್ಮಾವತಿ ಯಾದವ್ ಅವರ ಸಹೋದರ ಸುಬ್ಬರಾಯುಡು, ಧಾರವಾಡ ಹೈಕೋಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಇದರೊಂದಿಗೆ 2020ರ ಡಿಸೆಂಬರ್ 01ರಂದು ಬೆಂಗಳೂರಿನ ಮುಖ್ಯಮಂತ್ರಿ ಕಚೇರಿ, ಗೃಹ ಇಲಾಖೆ ಕಾರ್ಯದರ್ಶಿ, ಗೃಹ ಸಚಿವರ ಕಚೇರಿಗೂ ತೆರಳಿ ಮನವಿ ಸಲ್ಲಿಸಿದ್ದಾರೆ. ಮನವಿಗೆ ಸ್ಪಂದಿಸಿರುವ ಸರಕಾರ, ಪ್ರಕರಣವನ್ನು ಸಿಬಿಐಗೆ ವಹಿಸುವ ಸಂಬಂಧ ಮಾಹಿತಿ ಸಲ್ಲಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದೆ.

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್ಆರ್ ಟಿಸಿ ನೌಕರರ ಬೆಂಗಳೂರು ಚಲೋ ತಡೆಯಲು ಸರ್ಕಾರ ಪ್ರಯತ್ನಿಸಿದರೂ ಲೆಕ್ಕಕ್ಕಿಲ್ಲ

ಅವಲಕ್ಕಿ ಹೇಗೆ ಪ್ಯಾಕ್ ಮಾಡ್ತಾರೆ ಎಂದು ಈ ವಿಡಿಯೋ ನೋಡಿದರೆ ಗಾಬರಿಯಾಗ್ತೀರಿ Video

ಡಿಕೆ ಶಿವಕುಮಾರ್ ಬೆದರಿಕೆ ಎಲ್ಲಾ ನಮ್ಮ ಮುಂದೆ ಬೇಡ: ಬಿವೈ ವಿಜಯೇಂದ್ರ

Karnataka Weather: ಕೇರಳಕ್ಕೆ ಮಳೆ ನಿರೀಕ್ಷೆ, ಕರ್ನಾಟಕದಲ್ಲಿ ಮಳೆಯಿರುತ್ತಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಮುಂದಿನ ಸುದ್ದಿ
Show comments