206 ಜನರು ಕ್ವಾರಂಟೈನಿಂದ ನಾಪತ್ತೆ?

Webdunia
ಗುರುವಾರ, 4 ಜೂನ್ 2020 (18:13 IST)
ಕ್ವಾರಂಟೈನ್ ನಿಂದ 206 ಜನರು ತಪ್ಪಿಸಿಕೊಂಡು ಓಡಿ ಹೋಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ರಾಯಚೂರು ಜಿಲ್ಲೆಯ ಕ್ವಾರಂಟೈನ್ ಕೇಂದ್ರದಿಂದ 206 ಜನರು ತಪ್ಪಿಸಿಕೊಂಡು  ಹೋಗಿದ್ದಾರೆಂದು ಬೆಂಗಳೂರಿನ ರಾಜ್ಯದ ಕೋವಿಡ್ ವಾರ್ ನವರಿಂದ ಮಾಹಿತಿ ಬಂದಿರುತ್ತದೆ. ಅದರಂತೆ ಈಗಾಗಲೇ ಮಸ್ಕಿ ಠಾಣೆಯಲ್ಲಿ ಮೂವರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಈ 206 ಜನರ ವಿವರಗಳನ್ನು ಪರಿಶೀಲಿಸಿದಾಗ ಕೆಲವು ಜನರು ಮೊಬೈಲ್ ನಂಬರ್‌ ತಪ್ಪಾಗಿ ಕೊಟ್ಟಿದ್ದಾರೆ. ಒಂದಷ್ಟು ಮಂದಿ  ತಮ್ಮ ಮಕ್ಕಳ, ಸಂಬಂಧಿಕರ ಹಾಗೂ ತಮ್ಮ ಪರಿಚಯದವರ ನಂಬರ್ ಕೊಟ್ಟಿರುವುದು ಕಂಡು ಬಂದಿರುತ್ತದೆ.

ಕರೆ ಮಾಡಿದಾಗ ಅವರಿಗೆ ಹೋಗಿರುತ್ತವೆ. ಆದರೆ ವ್ಯಕ್ತಿಗಳನ್ನು ಪರಿಶೀಲನೆ ಮಾಡಿದಾಗ ಕ್ವಾರಂಟೈನ್ ನಲ್ಲಿಯೇ ಇದ್ದದ್ದು ಕಂಡು ಬಂದಿದೆ ಎಂದು ಪೊಲೀಸ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಟವರ್ ಲೊಕೇಷನ್ ನಿಂದ ಸುಮಾರು 30 ಕಿಲೋ ಮೀಟರ್ ದೂರದವರೆಗೆ ರೆಂಜ್  ಕಂಡು ಬಂದಿರುತ್ತದೆ.

ಆದರೆ ಇಲ್ಲಿಯವರೆಗೆ ಯಾರೂ ಹೊರಗೆ ಹೋಗಿದ್ದು ಕಂಡು ಬಂದಿಲ್ಲ. ಈ ವಿಷಯವಾಗಿ ಈಗಾಗಲೇ ವಿಚಾರಣೆ ಮುಂದುವರೆದಿದೆ. ನಿಜವಾಗಿಯೂ ಯಾರಾದರೂ ತಪ್ಪಿಸಿಕೊಂಡು ಹೋಗಿದ್ದರೆ ಮರಳಿ ಕ್ವಾರಂಟೈನ್ ಗೆ ದಾಖಲಿಸಿ ಅವರ ಮೇಲೆ ಪ್ರಕರಣವನ್ನು ದಾಖಲಿಸಲಾಗುವದು ಎಂದು ಪೊಲೀಸರು ತಿಳಿಸಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಭಾರತ ಕೇವಲ ಎಐ ಭಾಗವಲ್ಲ, ಮುನ್ನಡೆಸಿಕೊಂಡು ಹೋಗುತ್ತಿದೆ: ಪ್ರಧಾನಿ ಮೋದಿ

ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಸೇವಿಸಿದ್ರಾ ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments