Publish Date: Sun, 08 Aug 2021 (21:23 IST)
Updated Date: Sun, 08 Aug 2021 (21:26 IST)
ಕೊರೋನ ತಡೆಗಟ್ಟುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೇರಿದ ವೀಕೆಂಡ್ ಕರ್ಫ್ಯೂಗೆ ಇಂದು ಎರಡನೇ ದಿನ. ಹೀಗಾಗಿ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ವಾಹನಗಳನ್ನು ತಪಾಸಣೆ ನಡೆಸಿದರು. ಅಗತ್ಯ ವಸ್ತುಗಳ ಖರೀದಿಗೆ ಮಧ್ಯಾಹ್ನ 2 ಗಂಟೆಯವರೆಗೆ ಸಮಯ ನೀಡಲಾಗಿತ್ತು. ಹಾಗೂ ಖಾಸಗಿ ಬಸ್, ಸರ್ಕಾರಿ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಟ್ರೂ ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡದ ಪ್ರಮುಖ ರಸ್ತೆಗಳಲ್ಲಿ ವಾಹನ ಹಾಗೂ ಜನ ಸಂಚಾರ ವಿರಳವಾಗಿತ್ತು. ಬೆರಳೆಣಿಕೆಯಷ್ಟು ವಾಹನಗಳು ರಸ್ತೆಗಿಳಿದಿದ್ದರೂ ಪ್ರಯಾಣಿಕರಿಲ್ಲದ ಕಾರಣ ಸಂಚಾರ ಸ್ತಬ್ದವಾಗಿತ್ತು.
Geetha
Publish Date: Sun, 08 Aug 2021 (21:23 IST)
Updated Date: Sun, 08 Aug 2021 (21:26 IST)