Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕೊರೋನ ತಡೆಗಟ್ಟುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೇರಿದ ವೀಕೆಂಡ್ ಕರ್ಫ್ಯೂಗೆ ಇಂದು ಎರಡನೇ ದಿನ. ಹೀಗಾಗಿ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ವಾಹನಗಳನ್ನು ತಪಾಸಣೆ ನಡೆಸಿದರು. ಅಗತ್ಯ ವಸ್ತುಗಳ ಖರೀದಿಗೆ ಮಧ್ಯಾಹ್ನ 2 ಗಂಟೆಯವರೆಗೆ ಸಮಯ ನೀಡಲಾಗಿತ್ತು. ಹಾಗೂ ಖಾಸಗಿ ಬಸ್, ಸರ್ಕಾರಿ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಟ್ರೂ ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡದ ಪ್ರಮುಖ ರಸ್ತೆಗಳಲ್ಲಿ ವಾಹನ ಹಾಗೂ ಜನ ಸಂಚಾರ ವಿರಳವಾಗಿತ್ತು. ಬೆರಳೆಣಿಕೆಯಷ್ಟು ವಾಹನಗಳು ರಸ್ತೆಗಿಳಿದಿದ್ದರೂ ಪ್ರಯಾಣಿಕರಿಲ್ಲದ ಕಾರಣ ಸಂಚಾರ ಸ್ತಬ್ದವಾಗಿತ್ತು.