Webdunia - Bharat's app for daily news and videos

Install App

ಉತ್ತರ ಕರ್ನಾಟಕ ಭಾಗದಲ್ಲಿ 30ರಿಂದ 40 ಸ್ಥಾನ ನಿಶ್ಚಿತ : ಕುಮಾರಸ್ವಾಮಿ

Webdunia
ಶುಕ್ರವಾರ, 14 ಏಪ್ರಿಲ್ 2023 (12:54 IST)
ಕಲಬುರಗಿ : ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್ ಪಕ್ಷ ಸುಮಾರು 30 ರಿಂದ 40 ಸ್ಥಾನಗಳನ್ನು ಪಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರದ ಖಾಸಗಿ ಹೊಟೇಲ್ನಲ್ಲಿ ಗುರುವಾರ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ಅವರು, ಬಹಳಷ್ಟು ಜನ ಜನತಾ ಪರಿವಾರದಿಂದ ಬೇರೆ ಬೇರೆ ಪಕ್ಷಕ್ಕೆ ಹೋಗಿದ್ದು, ಇಂದು ಅವರೆಲ್ಲರೂ ಮರಳಿ ವಾಪಸ್ ಬರಲು ಚರ್ಚೆ ನಡೆಸಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್ ಪಕ್ಷ ಇಲ್ಲವೆಂದು ಲೇವಡಿ ಮಾಡುತ್ತಿದ್ದರು. ಆದರೆ ಈಗ ಉತ್ತರ ಕರ್ನಾಟಕದ ಭಾಗದಲ್ಲಿ ಜೆಡಿಎಸ್ ಪರವಾದ ವಾತಾವರಣ ನಿರ್ಮಾಣವಾಗಿದೆ ಎಂದರು. 

ವೈ.ಎಸ್.ವಿ ದತ್ತಾ ಅವರು ನನ್ನ ಜೊತೆಗೆ ಸಂಪರ್ಕದಲ್ಲಿಲ್ಲ. ಅವರು ಶಾಸಕರಿದ್ದಾಗಲೂ ನನ್ನ ಜೊತೆ ಸಂಪರ್ಕದಲ್ಲಿ ಇರಲಿಲ್ಲ. ನಾಳೆ ಬೆಳಗ್ಗೆ ಎರಡನೇ ಪಟ್ಟಿ ಬಿಡುಗಡೆ ಮಾಡುತ್ತೇನೆ. ಪಟ್ಟಿ ಬಿಡುಗಡೆ ಮಾಡಲು ಮಾನಸಿಕವಾಗಿ ಸಂಪೂರ್ಣ ಸಿದ್ಧನಾಗಿದ್ದೇನೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments