Webdunia - Bharat's app for daily news and videos

Install App

ವಿಮಾ ಕಂಪನಿಗೆ ಗ್ರಾಹಕರ ಆಯೋಗದಿಂದ 35 ಸಾವಿರ ರೂ. ದಂಡ!

Webdunia
ಸೋಮವಾರ, 19 ಜೂನ್ 2023 (13:40 IST)
ಧಾರವಾಡ : ವಿಮಾ ಪಾಲಿಸಿ ಚಾಲ್ತಿ ಇದ್ದರೂ ಚಿಕಿತ್ಸೆ ಪಡೆದ ಹಣ ಪಾವತಿಸಲು ನಿರಾಕರಿಸಿದ ಎಸ್ಬಿಐ ವಿಮಾ ಕಂಪನಿಗೆ 35 ಸಾವಿರ ರೂ. ದಂಡದೊಂದಿಗೆ 51,350 ರೂ. ಚಿಕಿತ್ಸಾ ವೆಚ್ಚವನ್ನು ಭರಿಸುವಂತೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ಆದೇಶಿಸಿದೆ.
 
ಹುಬ್ಬಳ್ಳಿಯ ರಾಜೇಂದ್ರ ಪತ್ತಾರ ಎಂಬವರು ಎಸ್ಬಿಐ ವಿಮಾ ಕಂಪನಿಯಲ್ಲಿ 10,502 ರೂ.ಗಳ ಪ್ರೀಮಿಯಮ್ ಸಂದಾಯ ಮಾಡಿದ್ದರು. 2019ರ ಜ.25ರಂದು ಮೆಡಿಕ್ಲೇಮ್ ಆರೋಗ್ಯ ಪ್ಲಸ್ ಪಾಲಿಸಿ ಪಡೆದು, ಪ್ರತಿ ವರ್ಷ ಪ್ರೀಮಿಯಮ್ ಹಣ ಪಾವತಿಸಿ ವಿಮೆ ನವೀಕರಿಸುತ್ತಿದ್ದರು.

2021ರ ಅಕ್ಟೋಬರ್ನಲ್ಲಿ ರಾಜೇಂದ್ರ ತಮ್ಮ ಮೂತ್ರದೋಷ ನಿವಾರಣೆಗಾಗಿ ಹುಬ್ಬಳ್ಳಿಯ ಶುಶ್ರುತಾ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆದಿದ್ದರು. ಅದಕ್ಕೆ 51,350 ರೂ. ವೆಚ್ಚ ತಗುಲಿತ್ತು. ತನ್ನ ಆರೋಗ್ಯ ಪ್ಲಸ್ ವಿಮಾ ಪಾಲಿಸಿ ಚಾಲ್ತಿ ಇರುವುದರಿಂದ ಆಸ್ಪತ್ರೆಯ ಖರ್ಚು ಭರಿಸುವಂತೆ ವಿಮಾ ಕಂಪನಿಗೆ ಅರ್ಜಿ ಸಲ್ಲಿಸಿದ್ದರು. 

ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಈಶಪ್ಪ ಭೂತೆ, ಒಂದು ತಿಂಗಳೊಳಗೆ ಆಸ್ಪತ್ರೆಯ ಚಿಕಿತ್ಸಾ ವೆಚ್ಚ 51,350 ರೂ. ಹಾಗೂ ದೂರುದಾರರಿಗೆ ಆಗಿರುವ ಅನಾನುಕೂಲ ಮತ್ತು ಮಾನಸಿಕ ತೊಂದರೆಗೆ 35 ಸಾವಿರ ರೂ. ಪರಿಹಾರ ಮತ್ತು ಪ್ರಕರಣದ ವೆಚ್ಚ 10 ಸಾವಿರ ರೂ. ಅನ್ನು ನೀಡುವಂತೆ ವಿಮಾ ಕಂಪನಿಗೆ ನಿರ್ದೇಶಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಮುಂದಿನ ಸುದ್ದಿ
Show comments