Publish Date: Tue, 02 Aug 2022 (20:04 IST)
Updated Date: Tue, 02 Aug 2022 (20:07 IST)
ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ರಾಜ್ಯ ಬಿಜೆಪಿಯಲ್ಲಿ ಕಾರ್ಯಕರ್ತರು ಪಕ್ಷದ ವಿರುದ್ದ ಆಕ್ರೋಶ ಹೊರಹಾಕುತ್ತಿರುವ ಬೆನ್ನೆಲ್ಲೇ ರಾಜ್ಯಕ್ಕೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಎಂಟ್ರಿಯಾಗುತ್ತಿದ್ದು, ಸಾಕಷ್ಟು ಕುತೂಹಲವನ್ನ ಹುಟ್ಟಿಸಿದೆ.
ಆಗಸ್ಟ್ 4 ರಂದು ರಾಜ್ಯಕ್ಕೆ ದಿಢೀರ್ ಭೇಟಿ ನೀಡುತ್ತಿದ್ದು, ಸಾಕಷ್ಟು ಪ್ಲಾನ್ವಮಾಡಿಕೊಂಡು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಖಾಸಗಿ
ಕಾರ್ಯಕ್ರಮದ ನೆಪದಲ್ಲಿ ಬೆಂಗಳೂರಿಗೆ ಭೇಟಿ ನೀಡಲಿರುವ ಅಮಿತ್ ಷಾ ಭೇಟಿ ಪಕ್ಷ,ಸರ್ಕಾರಕ್ಕೆ ದೊಡ್ಡ ಸಂಕಷ್ಟ ಎದುರಾಗುವಂತೆ ಮಾಡಿದೆ. ಇನ್ನೂ ಕಾರ್ಯಕರ್ತರ ರಾಜೀನಾಮೆಯಿಂದ ಪಕ್ಷದ ಡ್ಯಾಮೇಜ್ ಕಂಟ್ರೋಲ್ ಗೆ ಹೈಕಮಾಂಡ್ ನಾಯಕರು ಮುಂದಾಗಿದ್ದಾರೆ ಎನ್ನಲಾಗಿದೆ.