Webdunia - Bharat's app for daily news and videos

Install App

ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಮಕ್ಕಳ ಕುಟುಂಬಗಳಿಗೆ 5 ಲಕ್ಷ ಪರಿಹಾರ: ಡಿಸಿಎಂ ಶಿವಕುಮಾರ್‌

Sampriya
ಬುಧವಾರ, 23 ಅಕ್ಟೋಬರ್ 2024 (20:14 IST)
ಬೆಂಗಳೂರು: ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ಬಿಬಿಎಂಪಿ ವತಿಯಿಂದ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ತಿಳಿಸಿದರು.  

ಮನೆಗೆ ನೀರು ನುಗ್ಗಿ ತೊಂದರೆ ಉಂಟಾಗಿರುವವರಿಗೆ ತಲಾ 10 ಸಾವಿರ ಪರಿಹಾರ, ವಸತಿ ಇಲ್ಲದವರಿಗೆ ವಾಸಿಸಲು ತಾತ್ಕಾಲಿಕ ವಸತಿ ಹಾಗೂ ಊಟದ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಹೇಳಿದರು.

ಇದರ ಜತೆಗೆ ನಗರದಾದ್ಯಂತ ಮುಲಾಜಿಲ್ಲದೆ ರಾಜಕಾಲುವೆ ಒತ್ತುವರಿ ತೆರವಿಗೆ ಸೂಚನೆ ನೀಡಲಾಗಿದ್ದು, ಮಳೆ ನೀರುಗಾಲುವೆಗಳನ್ನು ಸ್ವಚ್ಛಗೊಳಿಸಿ ಸರಾಗವಾಗಿ ನೀರು ಹರಿಯುವಂತೆ ಮಾಡಲು ವಿಶ್ವಬ್ಯಾಂಕಿನಿಂದ 1 ಸಾವಿರ ಕೋಟಿ ಸಾಲ ಪಡೆದು ಈಗಾಗಲೇ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.

ಮಳೆಯಿಂದ ಸಮಸ್ಯೆಗೆ ಒಳಗಾಗಿರುವ ಯಲಹಂಕದ ಕೇಂದ್ರೀಯ ವಿಹಾರ ವಸತಿ ಸಮುಚ್ಚಯ, ಬ್ಯಾಟರಾಯನಪುರದ ಮರಿಯಣ್ಣಪಾಳ್ಯ, ಕೆ.ಆರ್. ಪುರಂನ ಹೊರಮಾವಿನ ಶ್ರೀ ಸಾಯಿ ಬಡಾವಣೆಗೆ ಶಿವಕುಮಾರ್ ಅವರು ಪಾಲಿಕೆ ಅಧಿಕಾರಿಗಳ ತಂಡದೊಂದಿಗೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Bengaluru viral video:ಬೆಂಗಳೂರಿನ ಹೋಟೆಲ್ ನ ಎಲ್ ಇಡಿ ಸ್ಕ್ರೀನ್ ಮೇಲೆಯೇ ಕನ್ನಡಿಗರ ಬೈಗುಳ

Shahbaz Sharif: ರಾತ್ರಿ 2.30 ಕ್ಕೆ ಕಾಲ್ ಬಂತು: ಸತ್ಯ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಷರೀಫ್

Bengaluru Mangaluru Rail: ಬೆಂಗಳೂರು, ಮಂಗಳೂರು ರೈಲ್ವೇ ಪ್ರಯಾಣಿಕರ ಗಮನಕ್ಕೆ: ರೈಲುಗಳು ಕ್ಯಾನ್ಸಲ್

Boycott Turkey: ಬೆಂಗಳೂರಿನಲ್ಲಿ ಟರ್ಕಿ ಮಾರ್ಬಲ್ ಗೂ ನಿಷೇಧ

ಮುಂದಿನ ಸುದ್ದಿ
Show comments