Webdunia - Bharat's app for daily news and videos

Install App

ಸೈಬರ್ ಖದೀಮರಿಂದ 70 ವರ್ಷದ ನಿವೃತ್ತ ಇಂಜಿನಿಯರ್ ಒಬ್ಬರ ಖಾತೆಗೆ ಕನ್ನ

Webdunia
ಗುರುವಾರ, 1 ಡಿಸೆಂಬರ್ 2022 (20:32 IST)
ಎಲ್ಲವೂ ಆನ್‌ಲೈನ್‌ ಆಗಿರುವ ಇಂದಿನ ಯುಗದಲ್ಲಿ ಪೊಲೀಸರು ಎಷ್ಟೇ ಅರಿವು ಮೂಡಿಸಿದರೂ ಸೈಬರ್ ವಂಚನೆ ಪ್ರಕರಣಗಳು ಮಾತ್ರ ಕಡಿಮೆಯಾಗುತ್ತಿಲ್ಲ. ಕ್ರೆಡಿಟ್ ಕಾರ್ಡ್ ರಿವಾರ್ಡ್ ಪಾಯಿಂಟ್ ಕ್ಲೈಮ್ ಎಂದು ಬ್ಯಾಂಕಿನ ಹೆಸರಿನಲ್ಲಿ ಲಿಂಕ್ ಕಳಿಸಿದ್ದ ಸೈಬರ್ ಖದೀಮರು 70 ವರ್ಷದ ನಿವೃತ್ತ ಇಂಜಿನಿಯರ್ ಒಬ್ಬರ ಖಾತೆಗೆ ಕನ್ನ ಹಾಕಿರುವ ಪ್ರಕರಣ ಆಗ್ನೇಯ ವಿಭಾಗದ ಸಿಇಎನ್ ಠಾಣೆಯಲ್ಲಿ ದಾಖಲಾಗಿದೆ.
 
ದೂರುದಾರರು ತಮ್ಮ ಮೊಬೈಲಿಗೆ ಕ್ರೆಡಿಟ್ ಕಾರ್ಡ್ ರಿವಾರ್ಡ್ ಪಾಯಿಂಟ್ಸ್ ಕ್ಲೈಮ್ ಎಂದು ವಂಚಕರು ಕಳಿಸಿದ್ದ ಲಿಂಕ್‌ ಕ್ಲಿಕ್ ಮಾಡಿದಾಗ ಅಧಿಕೃತ ವೆಬ್‌ಸೈಟ್‌ನ್ನೇ ಹೋಲುವ ನಕಲಿ ವೆಬ್‌ಸೈಟ್ ತೆರೆದಿದೆ. ನೋಡನೋಡುತ್ತಿದ್ದಂತೆ ಖಾತೆಯಲ್ಲಿದ್ದ 1.93 ಲಕ್ಷ ಕಡಿತವಾಗಿದೆ. 
ವಿಚಿತ್ರವೆಂದರೆ ನಿನ್ನೆ ಒಂದೇ ದಿನ ಆಗ್ನೇಯ ವಿಭಾಗದ ಅನೇಕ ಜನರ ನಂಬರಿಗೆ ಇದೇ ರೀತಿ ಕೆವೈಸಿ ಅಪ್ಡೇಟ್, ಕ್ರೆಡಿಟ್ ಕಾರ್ಡ್ ರಿವಾರ್ಡ್ ಪಾಯಿಂಟ್ ಕ್ಲೈಮ್ ಹೆಸರಿನಲ್ಲಿ ಇದೇ ರೀತಿಯ ಮೆಸೆಜುಗಳು ಬಂದಿದ್ದು ಹಲವಾರು ಖಾತೆಗಳಿಗೆ ಸೈಬರ್ ವಂಚಕರು ಕನ್ನ ಹಾಕಿದ್ದಾರೆ. 
 
ಸಿಇಎನ್ ಠಾಣೆಗೆ ಸಾಲು ಸಾಲು ದೂರುಗಳು ಬಂದಿದ್ದು ನೋಯ್ಡಾ ಮೂಲದ ಪೇಟಿಎಂ ಖಾತೆಗೆ ಹಣ ವರ್ಗಾವಣೆಯಾಗಿದೆ ಎಂಬುದನ್ನ ಪತ್ತೆ ಹಚ್ಚಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ.ಬಾಬಾ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments