Webdunia - Bharat's app for daily news and videos

Install App

ರಾಮಮಂದಿರ ನಿರ್ಮಾಣಕ್ಕಾಗಿ ಜಾಗೃತ ಸಮಾವೇಶ: ಪೊಲೀಸರೊಂದಿಗೆ ವಾಗ್ವಾದ

Webdunia
ಸೋಮವಾರ, 3 ಡಿಸೆಂಬರ್ 2018 (15:34 IST)
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಜನಾಗ್ರಹ ಸಭೆ ನಡೆಯಿತು. ಸಭೆ ಆರಂಭಕ್ಕೂ ಮುನ್ನ ಪೊಲೀಸರ ಜತೆ ಆಯೋಜಕರು ವಾಗ್ವಾದ ನಡೆಸಿದ ಘಟನೆಯೂ ನಡೆಯಿತು.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ವಿಜಯಪುರ ನಗರದ ಶಿವಾಜಿ ವೃತ್ತದಲ್ಲಿ ಜನಾಗ್ರಹ ಸಭೆ ನಡೆಯಿತು.  ವಿಜಯಪುರ ನಗರದ ಶಿವಾಜಿ ವೃತ್ತದಲ್ಲಿ ನಡೆದ ಸಭೆ ಆರಂಭಕ್ಕೂ ಮುನ್ನ ಕಾರ್ಯಕ್ರಮ ಆಯೋಜಕರು “ಬನಾಯೇಂಗೇ ‌ ಮಂದಿರ್” ಹಾಡನ್ನು ಸ್ಪೀಕರ್ ನಲ್ಲಿ ಹಾಕಿದರು. ಈ ಸಮಯದಲ್ಲಿ ಕಾರ್ಯಕ್ರಮ ಆಯೋಜಕರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದು ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.

ನಗರದ ಶಿವಾಜಿ ವೃತ್ತದಲ್ಲಿ ವಿ.ಹೆಚ್.ಪಿ‌ ಹಾಗೂ ಭಜರಂಗದಳ ಸಂಘಟನೆಗಳಿಂದ ಸಭೆ  ನಡೆಯುತ್ತಿದ್ದು, ಪೊಲೀಸರು ಹಾಡು ನಿಲ್ಲಿಸುವಂತೆ ಸೂಚಿಸಿದರು. ಆದರೆ  ಪೊಲೀಸರ ಮನವಿಗೆ ಸ್ಪಂದಿಸದ ವಿ.ಹೆಚ್.ಪಿ ಕಾರ್ಯಕರ್ತರು ಹಾಡು ಹಾಕಿದರು. ಇದರಿಂದ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಕೆಲ ಸಮಯದ ಬಳಿಕ ಮುಖಂಡರು ಮಧ್ಯಪ್ರವೇಶದ ಬಳಿಕ ಪರಿಸ್ಥಿತಿ ತಿಳಿಗೊಳಿಸಿದರು. ಕಾರ್ಯಕ್ರಮ ಆರಂಭಕ್ಕೂ ಮುನ್ನ ಶಿವಾಜಿ ಮಹಾರಾಜ್ ಹಾಗೂ ಶ್ರೀ ರಾಮನ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮ ಆರಂಭಿಸಿದರು.

ಕಾರ್ಯಕ್ರಮದಲ್ಲಿ ಬಸವಲಿಂಗ ಸ್ವಾಮಿ, ಮಹಾದೇವ ಶಿವಾಚಾರ್ಯ ಸ್ವಾಮೀಜಿ, ಯೋಗೇಶ್ವರಿ ಮಾತಾಜಿ ಮುಂತಾದವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಮಾತನಾಡಿದ  ಶಂಕರಲಿಂಗ ಮಠದ ಸೋಮಲಿಂಗ ಸ್ವಾಮಿ ನಾವು ರಾಮ ಮಂದಿರ ನಿರ್ಮಾಣ ಮಾಡುವಾಗ ಯಾರಾದರೂ ಮುಸ್ಲಿಂ ಗಳು ತಡೆಯಲು ಬಂದರೆ ಶಿವಾಜಿ ಮಹಾರಾಜರು ನಮಗೆ ತಲವಾರ ನೀಡಿದ್ದಾರೆ ಎಂದು ಆಕ್ರೋಶ ಹೊರಹಾಕಿದರು. ಇದೇ ಸಂದರ್ಭದಲ್ಲಿ ಕಾಶ್ಮೀರ ನಮ್ಮ ತಲೆ, ನಮ್ಮ ತಲೆ ತಗೆಯಲು ಬಂದರೆ ನಾವು ಯಾವುದೇ ಕಾರಣಕ್ಕೂ ಬಿಡಲ್ಲ ಎಂದು ವಾಗ್ದಾಳಿ ನಡೆಸಿದರು.

ಸಂಸದ ರಮೇಶ ಜಿಗಜಿಣಗಿ, ಮಾಜಿ ಸಚಿವ ಅಪ್ಪಾಸಾಹೇಬ್ ಪಟ್ಟಣಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

ಮುಂದಿನ ಸುದ್ದಿ
Show comments