Webdunia - Bharat's app for daily news and videos

Install App

ಮೊಬೈಲ್​ ಟವರ್​ಗಳಲ್ಲಿ ಇರುವ ಚಿಪ್​ ಕದಿಯುತ್ತಿದ್ದ ಕಳ್ಳ

Webdunia
ಸೋಮವಾರ, 4 ಅಕ್ಟೋಬರ್ 2021 (21:07 IST)
ಬೆಂಗಳೂರು: ಮೊಬೈಲ್​ ಟವರ್​ಗಳಲ್ಲಿ ಇರುವ ಚಿಪ್​ ಕದಿಯುತ್ತಿದ್ದ ಕಳ್ಳನನ್ನು ಪೀಣ್ಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 25 ಲಕ್ಷ ರೂ. ಮೌಲ್ಯದ 19 ಮೊಬೈಲ್ ಟವರ್ ಚಿಪ್ ವಶಕ್ಕೆ ಪಡೆಯಲಾಗಿದೆ.
ಗಂಗಾಧರ್​ ಬಂಧಿತ ಆರೋಪಿ.
ಖಾಸಗಿ ಮೊಬೈಲ್ ಕಂಪೆನಿಯಲ್ಲಿ ಸೈಟ್ ಇಂಜಿನಿಯರ್ ಆಗಿದ್ದ ಗಂಗಾಧರ್ ಕದ್ದ ಚಿಪ್​ಗಳನ್ನು ಅಕ್ರಮವಾಗು ಮಾರುತ್ತಿದ್ದ ಎಂದು ತಿಳಿದುಬಂದಿದೆ.
ಗಂಗಾಧರ್ ಮೊಬೈಲ್ ಟವರ್​ಗಳಿಗೆ ಹೋಗಿ ಬೆಲೆಬಾಳುವ ಚಿಪ್ ಗಳನ್ನ ಕಳ್ಳತನ ಮಾಡುತಿದ್ದ. ಈ ಬಗ್ಗೆ ಮೊಬೈಲ್ ಕಂಪೆನಿಯವರು ಪೀಣ್ಯ ಠಾಣೆಗೆ ದೂರನ್ನು ನೀಡಿದ್ದರು. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಟೆಲಿಕಾಂ ಕಂಪನಿಯ ಟವರ್​ಗಳ ಮ್ಯಾನೇಜ್ ಕೆಲಸ ನಿರ್ವಹಿಸುವ ಕಂಪನಿಯಲ್ಲಿ ಕೆಲಸಕ್ಕಿದ್ದ ಗಂಗಾಧರ್ ಟವರ್​ಗಳ ಸಂಪೂರ್ಣ ಮಾಹಿತಿ ಹೊಂದಿದ್ದ. ಕೆಲಸ ಕಳೆದುಕೊಂಡ ಬಳಿಕ ಹಣವಿಲ್ಲದೇ ಪರದಾಟ ಪಟ್ಟಿದ್ದ. ಬಳಿಕ ಈ ಕೃತ್ಯಕ್ಕೆ ಕೈ ಹಾಕಿದ್ದ ಎಂದು ಮಾಹಿತಿ ಲಭ್ಯವಾಗಿದೆ. ಪೀಣ್ಯ, ಕೊಣನಕುಂಟೆ, ಪುಲಕೇಶಿನಗರ ಸೇರಿದಂತೆ ಕನಕಪುರದಲ್ಲೂ ಚಿಪ್ ಕಳ್ಳತನ ಮಾಡಿದ್ದ ಎನ್ನಲಾಗಿದೆ. ಬೆಂಗಳೂರು ಸೇರಿದಂತೆ ಬೆಂಗಳೂರು ಗ್ರಾಮಾಂತರ, ರಾಮನಗರದಲ್ಲಿ ಒಟ್ಟು 9 ಪ್ರಕರಣ ಪತ್ತೆಯಾಗಿದೆ. ಪೀಣ್ಯ ಪೊಲೀಸರು ಆರೋಪಿಯ ವಿಚಾರಣೆ ಮುಂದುವರೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments