Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಭ್ರಷ್ಟಾಚಾರದಲ್ಲಿ ತೊಡಗಿದ್ದ ಅಧಿಕಾರಿ ಮೇಲೆ ಎಸಿಬಿ ದಾಳಿ ನಡೆದಿದೆ.
ತೋಟಗಾರಿಕೆ ಇಲಾಖೆ ಸಹಾಯಕ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾನೆ.
ಗದಗ ಜಿಲ್ಲೆ ಮುಂಡರಗಿ ತಾಲೂಕಿನ ತೋಟಗಾರಿಕೆ ಇಲಾಖೆ ಸಹಾಯಕ ಅಧಿಕಾರಿ ಸುರೇಶ್ ಬಾರಕೇರ್ ಮೇಲೆ ಎಸಿಬಿ ದಾಳಿ ನಡೆದಿದೆ.
ತೋಟಗಾರಿಕೆ ಕಚೇರಿಯಲ್ಲಿ ರೈತರಿಗೆ ಪಪ್ಪಾಯಿ ಬೆಳೆ ಸಹಾಯಧನ ಮಂಜೂರು ಮಾಡಲು ಲಂಚದ ಬೇಡಿಕೆ ಇಟ್ಟಿದ್ದರು.
ಪ್ರತಿ ಹೆಕ್ಟೇರ್ ಪಪ್ಪಾಯಿ ಗೆ 1.75 ಲಕ್ಷ ರೂ.ಸಹಾಯಧನವಿದೆ. 2 ಹೆಕ್ಟೇರ್ ಜಮೀನಿನಲ್ಲಿ ಪಪ್ಪಾಯಿ ಬೆಳೆ ಬೆಳೆಯಲು ಸಹಾಯಧನ ಮಂಜೂರಾತಿಗೆ ಬಾರಕೇರ 14 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಎ ಸಿ ಬಿ ದಾಳಿಗೆ ಬಿದ್ದಿದ್ದಾರೆ. ಎಸಿಬಿ ಡಿವೈಎಸ್ಪಿ ವಾಸುದೇವರಾಮ್ ನೇತೃತ್ವದಲ್ಲಿ ದಾಳಿ ನಡೆದಿದೆ.