ತಡೆಗೋಡೆ ಮೇಲೇರಿ ನಿಂತ ಟ್ರಕ್: ಆಗುಂಬೆ ಘಾಟ್ ನಲ್ಲಿ ತಪ್ಪಿದ ದುರಂತ

Webdunia
ಗುರುವಾರ, 5 ಆಗಸ್ಟ್ 2021 (20:14 IST)
ಆಗುಂಬೆ ಘಾಟ್ ನ 6 ಮತ್ತು 7 ನೇ ತಿರುವಿನ ಮಧ್ಯದಲ್ಲಿ ಪ್ರಪಾತದತ್ತ ಮುಖ ಮಾಡಿದ ಟ್ರಕ್ ರಸ್ತೆ ಬದಿಯಲ್ಲಿ ಅಡ್ಡಲಾಗಿ ನಿರ್ಮಿಸಲಾಗಿರುವ ಉಕ್ಕಿನ ತಡೆಗೋಡೆ ಮೇಲೆ ಹತ್ತಿ ನಿಂತಿದೆ.
ಶಿವಮೊಗ್ಗ ಕಡೆಯಿಂದ ಭತ್ತವನ್ನು ತುಂಬಿಕೊಂಡು ಮಂಗಳೂರಿನತ್ತ ತೆರಳುತ್ತಿದ್ದ ಟ್ರಕ್ ಅಪಘಾತಕ್ಕೀಡಾಗಿದ್ದರಿಂದ ಚಾಲಕ ಹಾಗೂ ಕ್ಲೀನರ್ ಗೆ ಸಣ್ಣಪುಟ್ಟ ಗಾಯಗಳು. ಈ ಸಂಬಂಧ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಕ್ಕಿನ ತಡೆಗೋಡೆ ಇದ್ದಿದ್ದರಿಂದಾಗಿ ಟ್ರಕ್ ಪ್ರಪಾತಕ್ಕೆ ಬೀಳುವುದು ತಪ್ಪಿದೆ. ಅರ್ಧ ಟ್ರಕ್ ಹೆದ್ದಾರಿ ಕಡೆ ಇದ್ದರೆ ಇನ್ನರ್ಧ ಟ್ರಕ್ ಪ್ರಪಾತದ ಕಡೆ ನೇತಾಡುತ್ತಿದೆ, ಕೂದಲೆಳೆಯ ಅಂತರದಲ್ಲಿ ತಪ್ಪಿದ ಭಾರೀ ದುರಂತ ತಪ್ಪಿದೆ.
ಒಂದು ವೇಳೆ ಟ್ರಕ್ ಪ್ರಪಾತಕ್ಕೆ ಬಿದ್ದಿದ್ದೇ ಆದಲ್ಲಿ ಆಗುಂಬೆ ಘಾಟ್ ನ ಏಳನೇ ತಿರುವಿನಲ್ಲಿ ಬರುತ್ತಿರುವ ವಾಹನಗಳ ಮೇಲೆಯೇ ಬೀಳುತ್ತದೆ. ಇದರಲ್ಲಿ ಸಾವು ನೋವು ವರದಿಯಾಗುವ ಸಂಭವ ಇತ್ತು. ಉಕ್ಕಿನ ತಡೆಗೋಡೆ ಇದ್ದಿದ್ದರಿಂದಾಗಿ ಭಾರೀ ಅವಘಡ ತಪ್ಪಿದಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆರ್ ಎಸ್ಎಸ್ ಮೋಹನ್ ಭಾಗವತ್ ಚಲಿಸುತ್ತಿದ್ದ ರೈಲಿಗೆ ಕಲ್ಲು

ಮೆಟ್ಟಿಲಿನಿಂದ ಬೀಳುತ್ತಿದ್ದ ಮಗುವನ್ನು ಹೀರೋ ಥರಾ ಹಿಡಿದು ಪ್ರಾಣ ಉಳಿಸಿದ ವ್ಯಕ್ತಿ: shocking video

ಪತ್ನಿಗೆ ಹೊಡೆಯಬಹುದು, ಆದರೆ ಮೂಳೆ ಮುರಿಯೋ ಹಾಗಿಲ್ಲ: ಹೊಸ ರೂಲ್ಸ್

ಭಾರತ ಪಾಕಿಸ್ತಾನಕ್ಕೆ ಇದೊಂದು ಎಚ್ಚರಿಕೆ ಕೊಟ್ಟೆ, ಯುದ್ಧ ನಿಲ್ಲಿಸಿಬಿಟ್ರು: ಹೊಗಳಿಕೊಂಡ ಡೊನಾಲ್ಡ್ ಟ್ರಂಪ್

ಮುಂದಿನ ಸುದ್ದಿ
Show comments