Publish Date: Fri, 25 Jan 2019 (15:30 IST)
Updated Date: Fri, 25 Jan 2019 (15:31 IST)
ಅಪ್ರಾಪ್ತೆಯನ್ನು ಅತ್ಯಾಚಾರ ಮಾಡಿ ಕೊಲೆಗೈಯಲಾಗಿದೆ ಎಂದು ಆರೋಪ ಕೇಳಿಬಂದಿದೆ. ಘಟನೆ ಖಂಡಿಸಿ ವಾಲ್ಮೀಕಿ ಸಮುದಾಯದ ಜನರಿಂದ ಪ್ರತಿಭಟನೆ ನಡೆದಿದೆ.
ಬಸವನಬಾಗೇವಾಡಿ -ವಿಜಯಪುರ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗಿದೆ. ತಾಲೂಕಾ ಆಸ್ಪತ್ರೆ ಬಳಿ ಹೆದ್ದಾರಿ ತಡೆದು ಹೋರಾಟ ನಡೆಯಿತು.
ಸ್ಥಳಕ್ಕೆ ಗೃಹ ಸಚಿವ ಎಂ. ಬಿ. ಪಾಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಎಂ. ಸಿ. ಮನಗೂಳಿ, ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಹಾಗೂ ಸ್ಥಳೀಯ ಶಾಸಕ ಸೋಮನಗೌಡ ಪಾಟೀಲ್ ಸಾಸನೂರ ಆಗಮಿಸುವಂತೆ ಪಟ್ಟು ಹಿಡಿದು ಪ್ರತಿಭಟನೆ ನಡೆಸಲಾಗಿದೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಬಿ. ಎಸ್. ನೇಮಗೌಡ, ತಹಶೀಲ್ದಾರ ಚೋರಗಸ್ತಿ, ಸಮಾಜ ಕಲ್ಯಾಣಾಧಿಕಾರಿ ಮಹೇಶ ಪೊದ್ದಾರ್ ಭೇಟಿ ನೀಡಿದರು. ಅಧಿಕಾರಿಗಳ ಜೊತೆಗೆ ಪ್ರತಿಭಟನಾಕಾರರ ಮಾತಿನ ಚಕಮಕಿ ನಡೆಯಿತು. ಬಾಲಕಿಯನ್ನು ಕೊಂದ ಕೊಲೆಗಾರರನ್ನು ಶೀಘ್ರವೇ ಬಂಧಿಸಬೇಕೆಂದು ಒತ್ತಾಯ ಮಾಡಿದರು.