ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಅಪ್ರಾಪ್ತೆ ಮೇಲೆ ಆ್ಯಸಿಡ್ ದಾಳಿ!

Webdunia
ಶನಿವಾರ, 18 ಫೆಬ್ರವರಿ 2023 (09:47 IST)
ರಾಮನಗರ : ಪ್ರೀತಿ ನಿರಾಕರಿಸಿದ್ದಕ್ಕೆ ಅಪ್ರಾಪ್ತೆಯ ಮೇಲೆ ಆ್ಯಸಿಡ್ ದಾಳಿ ನಡೆಸಿದ ಘಟನೆ ಕನಕಪುರದ ಬೈಪಾಸ್ ರಸ್ತೆಯ ನಾರಾಯಣಪ್ಪ ಕೆರೆ ಬಳಿ ನಡೆದಿದೆ.

ಕನಕಪುರದ ಕುರುಪೇಟೆ ನಿವಾಸಿ ಸುಮಂತ್ ಅಲಿಯಾಸ್ ಅಪ್ಪು ಎಂಬಾತ 17 ವರ್ಷದ ಅಪ್ರಾಪ್ತೆಯ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾನೆ.

ಅಪ್ರಾಪ್ತೆಯ ಬಳಿ ಮಾತನಾಡುವ ಬಾ ಎಂದು ಕರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಪಿಯುಸಿ ವಿದ್ಯಾರ್ಥಿನಿ ತಮ್ಮನ ಜೊತೆ ಬೈಪಾಸ್ ರಸ್ತೆಗೆ ಬಂದಿದ್ದಳು. ಈ ವೇಳೆ ಸುಮಂತ್ ತನ್ನ ಪ್ರೀತಿಯನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸಿದ್ದಾನೆ. ಆದರೆ ಸುಮಂತ್ ಪ್ರೀತಿಯನ್ನು ಯುವತಿ ನಿರಾಕರಿಸಿದ್ದಾಳೆ.

ಅಷ್ಟೇ ಅಲ್ಲದೇ ಸುಮಂತ್ ಈ ಹಿಂದೆಯೂ ಹಲವು ಬಾರಿ ಪ್ರೀತಿಸುವಂತೆ ಒತ್ತಾಯಿಸಿದ್ದ. ಅದಕ್ಕೆ ಒಪ್ಪದ ಹಿನ್ನೆಲೆಯಲ್ಲಿ ಸುಮಂತ್ ಯುವತಿಯ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾನೆ. ಇದಾದ ಬಳಿಕ ಸುಮಂತ್ ಬೈಕ್ನಲ್ಲಿ ಸ್ಥಳದಿಂದ ಪರಾರಿಯಾಗಿದ್ದಾನೆ. 

ಯುವತಿಯ ಮುಖಕ್ಕೆ ಆ್ಯಸಿಡ್ ಎರಚಿದ್ದರಿಂದ ಯುವತಿಯ ಎಡಗಣ್ಣು ಹಾಗೂ ಮುಖಕ್ಕೆ ಗಾಯಗಳಾಗಿದೆ. ಕೂಡಲೇ ಯುವತಿಗೆ ಕನಕಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ್ದು, ಬಳಿಕ ಬೆಂಗಳೂರಿನ ನಿಮ್ಹಾನ್ಸ್ಗೆ ರವಾನಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭೈರತಿ ಬಸವರಾಜ್ ಬೆನ್ನಲ್ಲೇ ಬಿಜೆಪಿ ಮತ್ತೊಬ್ಬ ಶಾಸಕ ವಶಕ್ಕೆ, ಯಾವಾ ಕೇಸ್‌ನಲ್ಲಿ ಗೊತ್ತಾ

ಲೈಂಗಿಕ ದೌರ್ಜನ್ಯ: ಕಾನ್‌ಸ್ಟೇಬಲ್‌ ಪತ್ನಿ ಆತ್ಮಹತ್ಯೆ, ಹೆಡ್‌ಕಾನ್‌ಸ್ಟೇಬಲ್ ವಿರುದ್ಧ ಕೇಸ್‌

ರಾಜ್ಯದ ಈ ಭಾಗದಲ್ಲಿ ಬಿಸಿಲ ಬೇಗೆಯ ನಡುವೆ ತಂಪೆರೆದ ಮಳೆರಾಯ

ಅಪ್ರಾಪ್ತ ಮಕ್ಕಳಿಗೆ ವಾಹನ ನೀಡುವ ಮೊದಲು ಪೋಷಕರು ಈ ಸುದ್ದಿ ಓದಲೇ ಬೇಕು

ಬಿಗ್ ಶಾಕಿಂಗ್‌: ಬಸವರಾಜ್ ಬೊಮ್ಮಾಯಿ ಪಿಎ ಮಗ ಆತ್ಮಹತ್ಯೆಗೆ ಶರಣು, ಕಾರಣ ನಿಗೂಢ

ಮುಂದಿನ ಸುದ್ದಿ
Show comments