Webdunia - Bharat's app for daily news and videos

Install App

ನೇಹಾ ಹಂತಕ ಫಯಾಜ್ ಮಾಡಿದ ತಪ್ಪಿಗೆ ಇಡೀ ಮುಸ್ಲಿಂ ಸಮುದಾಯವನ್ನು ದೂಷಿಸಬೇಡಿ: ನಟ ಕಿಶೋರ್

Krishnaveni K
ಭಾನುವಾರ, 21 ಏಪ್ರಿಲ್ 2024 (10:28 IST)
Photo Courtesy: Instagram
ಬೆಂಗಳೂರು: ಹುಬ್ಬಳ್ಳಿಯಲ್ಲಿ ಕಾರ್ಪೋಟರೇಟರ್ ಮಗಳು ನೇಹಾಳನ್ನು ಹತ್ಯೆ ಮಾಡಿದ ಫಯಾಜ್ ಪ್ರಕರಣ ಈಗ ಎಲ್ಲರೂ ಇಡೀ ಮುಸ್ಲಿಂ ಸಮುದಾಯದ ಮೇಲೆಯೇ ಆಕ್ರೋಶಗೊಳ್ಳುವಂತೆ ಮಾಡಿದೆ. ಇದರ ಬಗ್ಗೆ ಸ್ಯಾಂಡಲ್ ವುಡ್ ನಟ ಕಿಶೋರ್ ಪ್ರತಿಕ್ರಿಯಿಸಿದ್ದಾರೆ.

ಫಯಾಜ್ ಮಾಡಿದ ತಪ್ಪಿಗೆ ಇಡೀ ಮುಸ್ಲಿಂ ಸಮುದಾಯವನ್ನೇ ದೂಷಿಸುವುದು ತಪ್ಪು ಎಂದು ಕಿಶೋರ್ ಅಭಿಪ್ರಾಯಪಟ್ಟಿದ್ದಾರೆ. ಅವರ ಈ ಪ್ರತಿಕ್ರಿಯೆ ಹಲವು ಪರ-ವಿರೋಧ ಕಾಮೆಂಟ್ ಗಳು ಬಂದಿವೆ. ನೇಹಾ ಮೇಲೆ ಆದ ಅನ್ಯಾಯ ಯಾರೂ ಕ್ಷಮಿಸುವಂತದ್ದಲ್ಲ. ಅದಕ್ಕೆ ಕಾನೂನು ಕಠಿಣ ಕ್ರಮ ಕೈಗೊಳ್ಳಲೇಬೇಕು. ಆದರೆ ಫಯಾಜ್ ಮಾಡಿದ ತಪ್ಪಿಗೆ ಧರ್ಮದವರೇ ತಪ್ಪು ಎಂದು ಹೇಳಲಾಗದು ಎಂದಿದ್ದಾರೆ.

‘ಒಬ್ಬ ವ್ಯಕ್ತಿಯ ತಪ್ಪಿಗೆ ಇಡೀ ಕೋಮಿನ ಮೇಲೆ ಅಪರಾಧ ಹೊರಿಸುವುದು ಎಷ್ಟು ಸರಿ? ದಿನಕ್ಕೆ 78 ಕೊಲೆಗಳಾಗುವ, ಮಹಿಳೆಯರ ವಿರುದ್ಧ ದಿನಕ್ಕೆ 1224 ಅಪರಾಧಗಳಾಗುವ ನಾಡಿನಲ್ಲಿ ಎಷ್ಟು ಹಿಂದೂ, ಎಷ್ಟು ಕ್ರೈಸ್ತ ಅಪರಾಧಿಗಳು? ಹಾಗೆಂದರೆ ಆ ಧರ್ಮದವರೆಲ್ಲರೂ ಅಪರಾಧಿಗಳೇ? ಹಾಗೆ ನೋಡಿದರೆ ಎಷ್ಟು ಅಂತರ್ಧರ್ಮೀಯ ಜೋಡಿಗಳು ಅನ್ಯೋನ್ಯವಾಗಿ ಬಾಳುತ್ತಿಲ್ಲ? ಅದಕ್ಕೆ ಆ ಧರ್ಮಗಳೂ, ಅದರ ಜನರೂ ಜವಾಬ್ಧಾರಿಯೇ? ಹೇಗೆ? ಅಪರಾಧಿಗೆ ನ್ಯಾಯ ಕೊಡಿಸಲು ಶ್ರಮಿಸುವುದನ್ನು  ವಿರೋಧ ಪಕ್ಷವಾಗಲೀ ಯಾರಾಗಲೀ ಮಾಡಿದರೆ ಒಪ್ಪಿಕೊಳ್ಳಬೇಕು. ಅದು ಅವರ ಕರ್ತವ್ಯ. ಆದರೆ ಒಡೆದಾಳುವ ಈ ಧರ್ಮಾಂಧ ಜನ ನೇಹಾ ಸಾವನ್ನು ಕೋಮು ಬಣ್ಣ ಬಳಿದು ಜನರಲ್ಲಿ ಧ್ವೇಷ ಹೆಚ್ಚಿಸಿ ರಾಜಕೀಯ ಉದ್ದೇಶಕ್ಕೆ ಬಳಸುವುದು ಕೊಲೆಯಷ್ಟೇ ಘೋರ ಅಪರಾಧ ಎಂದು ಕಿಶೋರ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ಮುಂದಿನ ಸುದ್ದಿ
Show comments