Webdunia - Bharat's app for daily news and videos

Install App

ನಟಿ ರಮ್ಯಾ ವಿರುದ್ಧ ದೇಶದ್ರೋಹ ಕೇಸ್​​ ದಾಖಲು

Webdunia
ಬುಧವಾರ, 26 ಸೆಪ್ಟಂಬರ್ 2018 (15:55 IST)
ಸ್ಯಾಂಡಲ್‌ವುಡ್ ಕ್ವೀನ್, ನಟಿ ರಮ್ಯಾ ಕಾಂಗ್ರೆಸ್ಸಿನ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆಯಾದ್ಮೇಲಂತೂ ಆಗಾಗೇ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಸದ್ದು ಮಾಡ್ತಾನೆ ಇರ್ತಾರೆ. ಆದ್ರೆ ಈ ಬಾರಿ ಅವರ ಟ್ವಿಟರ್ ಪೋಸ್ಟ್‌ವೊಂದು ಅವ್ರನ್ನ ಸಂಕಷ್ಟಕ್ಕೆ ಸಿಲುಕಿಸಿದಂತಿದೆ. ಇತ್ತೀಚೆಗೆ ರಮ್ಯಾ, ಪ್ರಧಾನಿ ನರೇಂದ್ರ ಮೋದಿ ತಮ್ಮ ಮೇಣದ ಪ್ರತಿಮೆಯ ಹಣೆಯ ಮೇಲೆ  ‘ಚೋರ್‌’ ಎಂದು ಬಣ್ಣ ಬಳಿಯುತ್ತಿರುವಂತೆ ಫೋಟೋಶಾಪ್​​ ಮಾಡಿದ ಚಿತ್ರವನ್ನ ಟ್ವಿಟರ್​​ನಲ್ಲಿ ಶೇರ್‌ ಮಾಡಿದ್ರು. ಇದಕ್ಕೆ ಚೋರ್ ಪಿಎಂ ಚುಪ್ ಹೈ ಅಂತಾ ಕ್ಯಾಪ್ಶನ್ ಕೂಡ ಕೊಟ್ಟಿದ್ರು. ಈ ಹಿನ್ನೆಲೆಯಲ್ಲಿ ಇದೀಗ ರಮ್ಯಾ ವಿರುದ್ಧ ದೇಶದ್ರೋಹದ ಆರೋಪದಡಿ ಉತ್ತರಪ್ರದೇಶ ಪೊಲೀಸರು ಕೇಸ್​ ದಾಖಲಿಸಿಕೊಂಡಿದ್ದಾರೆ.

ಲಖನೌ ಮೂಲದ ವಕೀಲ ಸೈಯದ್ ರಿಜ್ವಾನ್​ ಅಹ್ಮದ್ ಅವರು ರಮ್ಯಾ ವಿರುದ್ಧ ದೂರು ದಾಖಲಿಸಿದ್ದಾರೆ. ಸೈಯದ್​ ಅವರ ದೂರಿನನ್ವಯ ಗೋಮತಿನಗರ ಪೊಲೀಸ್​ ಠಾಣೆಯಲ್ಲಿ ಐಟಿ ಕಾಯ್ದೆಯ ಸೆಕ್ಷನ್ 67 ಹಾಗೂ ದೇಶದ್ರೋಹ( ಸೆಕ್ಷನ್ 124ಎ) ಅಡಿ ಕೇಸ್​ ದಾಖಲಾಗಿದೆ.
ಈ ಬಗ್ಗೆ ಟ್ವೀಟ್​ ಮಾಡಿರೋ ಸೈಯದ್​, ಎಫ್​​ಐಆರ್​​ ಪ್ರತಿಯ ಫೋಟೋ ಹಂಚಿಕೊಂಡಿದ್ದಾರೆ.  ಎಷ್ಟು ಬಾರಿ ಹೇಳಿದ್ರೂ ರಮ್ಯಾ ತಮ್ಮ ಟ್ವೀಟ್​​ ಡಿಲೀಟ್​ ಮಾಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ದೂರು ದಾಖಲಿಸಿದ್ದಾಗಿ ಸೈಯದ್​ ಹೇಳಿದ್ದಾರೆ. ನನಗೆ ಬಿಜೆಪಿ/ಆರ್​ಎಸ್​ಎಸ್​ನೊಂದಿಗೆ ಯಾವುದೇ ಸಂಬಂಧಿವಿಲ್ಲ ಎಂದು ಸೈಯದ್​ ಸ್ಪಷ್ಟಪಡಿಸಿದ್ದು, ರಮ್ಯಾ ಮಾಡಿರುವ ಈ ಪೋಸ್ಟ್​ ಭಾರತದ ಗಣತಂತ್ರ ಹಾಗೂ ಪ್ರಧಾನಿಯ ಮೇಲಿನ ದಾಳಿ ಎಂದು ಹೇಳಿದ್ದಾರೆ. ಈ ಸುದ್ದಿಗೆ ರಮ್ಯಾ, “ಓಹ್ ..!ಚೆನ್ನಾಗಿದೆ” ಎಂದಷ್ಟೇ ಇವತ್ತು ಪ್ರತಿಕ್ರಿಯಿಸಿದ್ದಾರೆ.
ಇದಲ್ಲದೆ ದೆಹಲಿ ಮೂಲದ ವಕೀಲ ವಿಭೋರ್‌ ಆನಂದ್‌(25) ಎಂಬುವವರು ರಮ್ಯಾ ವಿರುದ್ಧ 10 ಸಾವಿರ ಕೋಟಿ ರೂಪಾಯಿಯ ಮಾನನಷ್ಟ ಮೊಕದ್ದಮೆ ಹೂಡಲು ಮುಂದಾಗಿದ್ದಾರೆ. “ಮಂಗಳವಾರ ರಾತ್ರಿಯೊಳಗೆ ಟ್ವೀಟ್‌ ಅನ್ನು ತೆಗೆದು, ಕ್ಷಮೆ ಕೇಳದೇ ಇದ್ದಲ್ಲಿ ರಮ್ಯಾ ವಿರುದ್ಧ 10 ಸಾವಿರ ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಲಾಗುವುದು. ರಾಹುಲ್‌ ಗಾಂಧಿ ಹಾಗೂ ಕಾಂಗ್ರೆಸ್​​ ಕೂಡ ಇದಕ್ಕೆ ಜವಾಬ್ದಾರಿಯಾಗುತ್ತಾರೆ ಎಂದು ಹೇಳಿದ್ದರು. ಇದೀಗ ರಮ್ಯಾಗೆ ನೀಡಿದ್ದ ಗಡುವು ಮುಗಿದಿದ್ದು ಕೇಸ್​ ದಾಖಲಿಸುತ್ತೇನೆ ಎಂದು ಅವರು ಹೇಳಿದ್ದಾರೆ.

10 ಸಾವಿರ ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಲು ಶೇ.1ರಷ್ಟುಮೊತ್ತವನ್ನು ನ್ಯಾಯಾಲಯದಲ್ಲಿ ಠೇವಣಿ ಇಡಬೇಕು. ಇದಕ್ಕಾಗಿ ವಿಭೋರ್​, ಆನ್​​ಲೈನ್​​ ಕ್ರೌಡ್​​ಫಂಡಿಂಗ್​ ಮೂಲಕ  ಹಣ ಸಂಗ್ರಹಕ್ಕೆ ಮುಂದಾಗಿದ್ದಾರೆ. ಈ ಹಿಂದೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ವಿರುದ್ಧ ವಿಭೋರ್‌ ದೇಶದ್ರೋಹ ಪ್ರಕರಣ ದಾಖಲಿಸಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಈ ಜಿಲ್ಲೆಯಲ್ಲಿ ಇಂದು ಸಂಜೆ ಭಾರೀ ಮಳೆ ಸಂಭವ

ಚಿನ್ನಸ್ವಾಮಿ ಕಾಲ್ತುಳಿತಕೇಸ್‌ನ ಕ್ಲೀನ್ ಚಿಟ್ ವರದಿ ಸಿಕ್ಕ ಬಳಿ ನಾನೇ ಸುಟ್ಟು ಹಾಕ್ತೀನಿ

ರೇಪಿಸ್ಟ್‌ಗಳನ್ನು ರಕ್ಷಿಸುವವರು ಶಿಕ್ಷಣ ಸಚಿವ: ರಾಹುಲ್ ಗಾಂಧಿ

ರಾಜ್ಯವನ್ನೇ ಬೆಚ್ಚಿಬೀಳಿಸಿದ ಲಾವಣ್ಯ ಹತ್ಯೆ‌ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇಕೆದಾಟು ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ತಮಿಳು ಸಿಎಂ ವಿಜಯ್ ಜೋಸೆಫ್ ಪತ್ರ

ಮುಂದಿನ ಸುದ್ದಿ
Show comments