Webdunia - Bharat's app for daily news and videos

Install App

ರಾಜ್ಯ ಸರ್ಕಾರದ ‘ಅಕ್ಕ ಕೆಫೆ’ ಯೋಜನೆಯ ಡೀಟೈಲ್ಸ್ ಇಲ್ಲಿದೆ

Krishnaveni K
ಶನಿವಾರ, 24 ಫೆಬ್ರವರಿ 2024 (13:26 IST)
Photo Courtesy: Twitter
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸರ್ಕಾರ ಮಹಿಳೆಯರ ಸ್ವಾವಲಂಬಿ ಬದುಕಿಗೆ ಉತ್ತೇಜನ ನೀಡುವ ದೃಷ್ಟಿಯಿಂದ ‘ಅಕ್ಕ ಕೆಫೆ’ ಎನ್ನುವ ಯೋಜನೆಗೆ ಚಾಲನೆ ನೀಡಿದೆ. ಹಾಗಿದ್ದರೆ ಅಕ್ಕ ಕೆಫೆ ಯೋಜನೆ ಎಂದರೇನು, ಯಾರಿಗೆ ಲಾಭ ಇಲ್ಲಿದೆ ಮಾಹಿತಿ.

ಅಕ್ಕ ಕೆಫೆ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಣೆ ಮಾಡಿದ್ದರು. ಇದನ್ನು ಕಾರ್ಯಗತಗೊಳಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಅದರ ಮೊದಲ ಹಂತವಾಗಿ ಅಕ್ಕ ಕೆಫೆ ಲಾಂಛನವನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯದಲ್ಲಿ ಸುಮಾರು 2,500 ಕಾಫಿ ಕಿಯೋಸ್ಕ್ ಗಳನ್ನು ಸ್ಥಾಪಿಸುವ ಉದ್ದೇಶ ಹೊಂದಿದೆ. ಇದರಿಂದ ಮಹಿಳೆಯರು ಸ್ವಾವಲಂಬಿಗಳಾಗಿ ತಮ್ಮದೇ ಉದ್ಯಮದಲ್ಲಿ ತೊಡಗಿಸಿಕೊಳ್ಳಬಹುದಾಗಿದೆ.

ಅಕ್ಕ ಕೆಫೆ ಯೋಜನೆಯಡಿ ಮಹಿಳೆಯರಿಗೆ ತಮ್ಮದೇ ಆಹಾರೋದ್ಯಮ ಸ್ಥಾಪಿಸಲು ಬೇಕಾದ ತರಬೇತಿಯನ್ನೂ ನೀಡಲಾಗುತ್ತದೆ. ಆ ಮೂಲಕ ಅಕ್ಕ ಕೆಫೆಯನ್ನು ಮಹಿಳೆಯರಿಗೆಂದೇ ಮಾಡಲಾಗಿದೆ. ಮಹಿಳೆಯರಿಗೆ ಸೂಕ್ತ ತರಬೇತಿ ಜೊತೆಗೆ ತಾಂತ್ರಿಕ ಬೆಂಬಲಗಳನ್ನೂ ನೀಡಲಾಗುತ್ತದೆ.

ಪ್ರಮುಖ ಪ್ರವಾಸೀ ತಾಣಗಳು, ಜನನಿಬಿಡ ಸ್ಥಳಗಳು ಸರ್ಕಾರಿ ಆಸ್ಪತ್ರೆ ಆವರಣ ಮುಂತಾದೆಡೆ ಈ ಕೆಫೆಗಳು ಸದ್ಯದಲ್ಲಿಯೇ ಆರಂಭವಾಗಲಿದೆ. ಇಡೀ ರಾಜ್ಯದಲ್ಲಿ ಅಕ್ಕ ಕೆಫೆಗೆ ಒಂದೇ ಲಾಂಛನವಿರಲಿದೆ. ಮಹಿಳೆಯರನ್ನು ಸ್ವಾವಲಂಬಿಗಳಾಗಿ ಮಾಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗುತ್ತದೆ. ಈ ಬ್ರ್ಯಾಂಡ್ ನಡಿಯಲ್ಲಿ ಆಹಾರೋದ್ಯಮ ಸಂಸ್ಥೆ ಕಟ್ಟಿ ಮಹಿಳೆಯರು ಉದ್ಯಮ ಕ್ಷೇತ್ರದಲ್ಲಿ ತಮ್ಮದೇ ಹೆಸರು ಮಾಡಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ