ಎಣ್ಣೆ ಕಿಕ್ ತಂದ ಅಪತು

Webdunia
ಬುಧವಾರ, 9 ಮಾರ್ಚ್ 2022 (18:58 IST)
ಮುಂಜಾನೆ ಟೇಕಲ್ ನಲ್ಲಿ ರೈಲು ತಡವಾದ ಹಿನ್ನೆಲೆ ಊರಿಗೆ ವಾಪಸ್ ಆಗಿದ್ದ ಸ್ನೇಹಿತರು, ಕೆರೆ ಬಳಿ ಪಾರ್ಟಿ ಮಾಡಿ ತೆಪ್ಪದಲ್ಲಿ ರೌಂಡ್ಸ್ ಮಾಡಲು ಹೋಗಿದ್ದರು. ತೆಪ್ಪ ಮುಗುಚಿದ ವೇಳೆ ನೀರಿನಲ್ಲಿ ಮುಳುಗುತ್ತಿದ್ದವರ ರಕ್ಷಣೆಗೆ ಸ್ಥಳೀಯರು ಮುಂದಾಗಿದ್ದಾರೆ. ಕೆರೆ ಮಧ್ಯದಲ್ಲಿ ಸಿಲುಕಿದ್ದ ಕಾರಣವಾಗಿ ರಕ್ಷಣೆ ಮಾಡಲು ಸಾಧ್ಯವಾಗಿಲ್ಲ.
ಕೋಲಾರ: ಕೆರೆಯಲ್ಲಿ ತೆಪ್ಪ ಮುಗುಚಿ ಬಿದ್ದು ಮೂವರು ಯುವಕರು ಜಲಸಮಾಧಿಯಾಗಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ನೇರಳೆಕೆರೆ ಬಳಿ ನಡೆದಿದೆ. ಚಿಕ್ಕವಲಗಮಾದಿ ನವೀನ್ (32), ನೇರಳೆಕೆರೆ ರಾಜೇಂದ್ರ (32) ಮತ್ತು ಮೋಹನ್ (28) ಮೃತಪಟ್ಟವರು. ಇವರ ಜೊತೆಗಿದ್ದ ಶಿವರಾಜ್ ಎಂಬಾತ ಊಟ ತರಲು ತೆರಳಿದ್ದರಿಂದ ಬದುಕುಳಿದಿದ್ದಾನೆ. ಇಂದು ಮುಂಜಾನೆ ಟೇಕಲ್ ನಲ್ಲಿ ರೈಲು ತಡವಾದ ಹಿನ್ನೆಲೆ ಊರಿಗೆ ವಾಪಸ್ ಆಗಿದ್ದ ಸ್ನೇಹಿತರು, ಕೆರೆ ಬಳಿ ಪಾರ್ಟಿ ಮಾಡಿ ತೆಪ್ಪದಲ್ಲಿ ರೌಂಡ್ಸ್ ಮಾಡಲು ಹೋಗಿದ್ದರು. ತೆಪ್ಪ ಮುಗುಚಿದ ವೇಳೆ ನೀರಿನಲ್ಲಿ ಮುಳುಗುತ್ತಿದ್ದವರ ರಕ್ಷಣೆಗೆ ಸ್ಥಳೀಯರು ಮುಂದಾಗಿದ್ದಾರೆ. ಕೆರೆ ಮಧ್ಯದಲ್ಲಿ ಸಿಲುಕಿದ್ದ ಕಾರಣವಾಗಿ ರಕ್ಷಣೆ ಮಾಡಲು ಸಾಧ್ಯವಾಗಿಲ್ಲ. ಮೂವರ ಶವಗಳಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ. ಸ್ಥಳಕ್ಕೆ ಕೆಜಿಎಫ್ ಎಸ್​ಪಿ ಡಿ.ಕೆ. ಧರಣಿ ದೇವಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಜನೇಯಸ್ವಾಮಿಯೇ ಬಂದನೋ... ಹನುಮಂತನ ವಿಗ್ರಹದ ಮುಂದೆ ಕೂತ ಕೋತಿ ಮಾಡಿದ್ದೇನು: ಅಚ್ಚರಿಯ Video

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ

ಜೂನ್ 1 ರಿಂದ ಬೆಂಗಳೂರು- ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments