Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಅಮಿತ್ ಶಾ ತೀರ್ಮಾನ ಪ್ರಕಟಿಸಿದ ನಂತರ ಸಂಪುಟ ಸರ್ಜರಿ ಕುರಿತು ತೀರ್ಮಾನ ಪ್ರಕಟಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನರಚನೆಯೋ ಎಂಬ ಬಗ್ಗೆ ಯಾವುದೇ ಯೋಚನೆ ಮಾಡಿಲ್ಲ. ಸಂಪುಟ ತೀರ್ಮಾನ ಬಗ್ಗೆ ಹೈಕಮಾಂಡ್ ತೀರ್ಮಾನ ಪ್ರಕಟಿಸಿದ ನಂತರ ವಿವರ ನೀಡುವುದಾಗಿ ಹೇಳಿದರು.
ಸಚಿವ ಸಂಪುಟ ವಿಸ್ತರಣೆ ಕುರಿತು ದೆಹಲಿಗೆ ಹೋದ ನಂತರ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತೇವೆ. ಇದೇ ವೇಳೆ ಡಿಸಿಎಂ ಹುದ್ದೆ ನೇಮಕ ವಿವಾದ ಮಾಧ್ಯಮಗಳಲ್ಲೇ ಕೇಳಿ ಬರುತ್ತಿದೆ ಎಂದು ಅವರು ಹೇಳಿದರು.