ಅಂಜನಾದ್ರಿ ಅಭಿವೃದ್ಧಿ ಕೂರಿತು ಸಭೆ

Webdunia
ಶನಿವಾರ, 25 ಜೂನ್ 2022 (20:25 IST)
ಸಿಎಂ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಕುರಿತು ಸಭೆ ನಡೆಸಲಾಯಿತು. ಸಭೆ ಬಳಿಕ ಮಾತನಾಡಿದ ಸಚಿವ ಆನಂದ್ ಸಿಂಗ್, ಹನುಮನ ಜನ್ಮಸ್ಥಳ ಗೊಂದಲ ವಿಚಾರವಾಗಿ ಚರ್ಚೆ ನಡೆದಿದೆ. ಕೇಂದ್ರ ಪುರಾತತ್ವ ಇಲಾಖೆ ಹಾಗೂ ರಾಜ್ಯ ಪುರಾತತ್ವ ಇಲಾಖೆಗೆ ಸಿಎಂ ಸೂಚನೆ ಕೊಟ್ಟಿದ್ದಾರೆ. ಅಂಜನಾದ್ರಿ ಬೆಟ್ಟದ ದಾಖಲೆಗಳ ಪರಿಶೀಲನೆ ಹಾಗೂ ಸಂಶೋಧನೆ ಬಳಿಕ ಒಂದು ಅಧಿಕೃತವಾಗಿ ಅಲ್ಲಿ ಬೋರ್ಡ್ ಹಾಕಲು ಸಿಎಂ ಸೂಚನೆ ನೀಡಿದ್ದಾರೆ. ಕಿಷ್ಕಿಂದೆ ಹನುಮ ಹುಟ್ಟಿದ ಸ್ಥಳ ಹೇಗಾಯ್ತು? ಇತಿಹಾಸ ಪುಟದಲ್ಲಿ ಏನಿದೆ? ಕಿಷ್ಕಿಂದೆಯಲ್ಲಿ ಇನ್ಮುಂದೆ ಯಾರು ಚಕಾರ ಎತ್ತಬಾರದು ಅನ್ನುವುದು ಸೇರಿದಂತೆ ವಿವಿಧ ವಿಚಾರಗಳಿಗೆ ಕೊನೆ ಹಾಡಬೇಕು. ಅದಕ್ಕಾಗಿ ಸಿಎಂ ಸೂಚನೆ ಕೊಟ್ಟಿದ್ದಾರೆ ಎಂದರು. ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ಈಗಾಗಲೇ ನೀಡಿರುವ 100 ಕೋಟಿ ಅನುದಾನ ಕೋಡಲೇ ಬಿಡುಗಡೆ ಮಾಡಲು ಸಿಎಂ ಸೂಚನೆ ಕೊಟ್ಟಿದ್ದಾರೆ. ಸಭೆಯಲ್ಲಿ ಭಾಗವಹಿಸಿದ್ದ ಆರ್ಥಿಕ ಇಲಾಖೆಯ ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ. ಅಂಜನಾದ್ರಿ ಬೆಟ್ಟದಲ್ಲಿ ಪಾರ್ಕಿಂಗ್, ರೋಪ್ ವೇ, ರಸ್ತೆ ನಿರ್ಮಾಣ ಹಾಗೂ ಫುಟಪಾಥ್ ಕಾಮಗಾರಿಗೆ ಹಣ ಬಿಡುಗಡೆ ಮಾಡುವಂತೆ ಸಿಎಂ ತಿಳಿಸಿದ್ದಾರೆ. ಜೊತೆಗೆ ಎರಡು ತಿಂಗಳೊಳಗೆ ಎಲ್ಲಾ ಕಾಮಗಾರಿಗಳಿಗೂ ಅಡಿಗಲ್ಲು ಹಾಕಲು ಹೇಳಿದ್ದಾರೆ. ಜುಲೈ 15ರೊಳಗೆ ಸಿಎಂ ಬೊಮ್ಮಾಯಿ ಸಹ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವ್ಯಾಲೆಂಟೈನ್ಸ್ ಡೇ: ಬೆಂಗಳೂರಿನಿಂದ ಅತಿ ಹೆಚ್ಚು ಗುಲಾಬಿ ರಪ್ತು, ಹೊಸ ಮೈಲಿಗಲ್ಲು

ಅಜಿತ್ ಪವಾರ್ ಸಾವಿನ ಬಗ್ಗೆ ಸಿಡಿದೆದ್ದ ಪುತ್ರ ರೋಹಿತ್ ಪವಾರ್, ಹೇಳಿದ್ದೇನು

ಮುಡಾ ನಿವೇಶನ ಹಂಚಿಕೆ: ಪ್ರಕರಣ ಸಂಬಂಧ ಹೊಸ ಬಾಂಬ್‌ ಸಿಡಿಸಿದ ಸ್ನೇಹಮಹಿ ಕೃಷ್ಣ

ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಪ್ರಕಟ: ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಮುಂದಿನ ಸುದ್ದಿ
Show comments