Webdunia - Bharat's app for daily news and videos

Install App

ಸಿಲಿಕಾನ್ ಸಿಟಿಯಲ್ಲಿ ಮತ್ತೇ ವರುಣನ ಅವಾಂತರ, ಹಲವೆಡೆ ರಸ್ತೆಗಳು ಜಲಾವೃತ

Sampriya
ಬುಧವಾರ, 23 ಅಕ್ಟೋಬರ್ 2024 (18:55 IST)
Photo Courtesy X
ಬೆಂಗಳೂರು: ಕಳೆದ ವಾರದಿಂದ ಸುರಿಯುತ್ತಿರುವ ಮಳೆಗೆ ಬೆಂಗಳೂರಿನ ಜನಜೀವನ ಅಸ್ತವ್ಯಸ್ತವಾಗಿದೆ. ನಿನ್ನೆ ಸಂಜೆಯಿಂದ ಮಳೆರಾಯ ಸ್ವಲ್ಪ ಬಿಡುವು ನೀಡಿದ್ದು, ಇಂದು ಸಂಜೆ ಮತ್ತೇ ಮಳೆ ಎಂಟ್ರಿಯಾಗಿದೆ. ಗಾಳಿ ಮಳೆಯಿಂದಾಗಿ  ಹಲವೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿದೆ. ಆ ಮೂಲಕ ಸಿಟಿ ಮಂದಿ ಮತ್ತೆ ಕಂಗಾಲಾಗಿದ್ದಾರೆ.  ಹಲವೆಡೆ ಸುರಿಯುತ್ತಿರುವ ಭಾರೀ ಮಳೆಗೆ ಮಲ್ಲೇಶ್ವರಂನ ಹಳ್ಳಿ ಮನೆ ಮುಂದೆ ಬೃಹದಾಕಾರ ಮರ ಧರೆಗುರುಳಿದು ಅವಾಂತರ ಸೃಷ್ಟಿಯಾಗಿದೆ.

ಈ ಪ್ರದೇಶದಲ್ಲಿ ಜೋರು ಮಳೆ:

ವಿಧಾನಸೌಧ, ಕೆ.ಆರ್.ಸರ್ಕಲ್‌, ಮೈಸೂರು ಬ್ಯಾಂಕ್ ಸರ್ಕಲ್​, ಮೆಜೆಸ್ಟಿಕ್‌, ಕೆ.ಆರ್‌.ಮಾರ್ಕೆಟ್‌, ಕಾರ್ಪೊರೇಷನ್ ಸರ್ಕಲ್​ ಶಾಂತಿನಗರ ಮತ್ತು ರಿಚ್ಮಂಡ್‌ ಸರ್ಕಲ್‌, ಡಾಲರ್ಸ್ ಕಾಲೋನಿ, ಹೆಬ್ಬಾಳ, ಸಂಜಯ್ ನಗರ, ಬಿಇಎಲ್ ರೋಡ್, ಆರ್‌ ಟಿ ನಗರ, ಎಂಎಸ್ ರಾಮಯ್ಯ ಆಸ್ಪತ್ರೆ ಸೇರಿದಂತೆ
ಹಲವೆಡೆ ಭಾರೀ ಮಳೆಯಾಗಿದೆ. ಕೆಂಗೀರಿ ಸುತ್ತಮುತ್ತ ಜಿಟಿ‌ ಜಿಟಿ ಮಳೆ ಆರಂಭವಾಗಿದ್ದರೆ, ಜಯನಗರ 7ನೇ ಹಂತದಲ್ಲಿ ಸುಮಾರು 30 ನಿಮಿಷದಿಂದ ಜೋರು ಗಾಳಿ ಜೊತೆಗೆ ಧಾರಾಕಾರ ಮಳೆ ಸುರಿಯುತ್ತಿದೆ.

ಇನ್ನೂ ಹಲವೆಡೆ ಮ್ಯಾನ್ ಹೋಲ್ ಓಪನ್ ಆಗಿ ನೀರು ರಸ್ತೆಗೆ ಬಂದಿದೆ. ಪರಿಣಾಮ ಶಾಂತಿನಗರದ ಬಿಟಿಎಸ್ ರಸ್ತೆ ಕೆಸರು ಮಯವಾಗಿದೆ. ನೀರು ತುಬಿಕೊಂಡ ಹಿನ್ನಲೆ ಗುಂಡಿಗಳು ಕಾಣದಂತಾಗಿದ್ದು, ಬೈಕ್ ಸವಾರರು ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ  ರೂಪೇನ ಅಗ್ರಹಾರದ ಬಳಿ ವಾಟರ್ ಲಾಗಿಂಗ್ ಆಗಿದ್ದು ಹೊಸೂರು ಮುಖ್ಯ ರಸ್ತೆ ಮೂಲಕ ನಗರದ ಒಳ ಭಾಗಕ್ಕೆ ಬರುವ ಸಂಚಾರ ನಿಧಾನಗತಿಯಲ್ಲಿ ಸಾಗುತ್ತಿದೆ. ಆದ್ದರಿಂದ ವಾಹನ ಸವಾರರು ಬದಲಿ ರಸ್ತೆಗಳನ್ನು ಬಳಸುವುದು ಮತ್ತು ಸಹಕರಿಸುವುದು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments