Webdunia - Bharat's app for daily news and videos

Install App

ಸಿದ್ದರಾಮಯ್ಯ ಕುಟುಂಬದ ವಿರುದ್ಧ ಮತ್ತೊಂದು ಗಂಭೀರ ಆರೋಪ: ಸ್ನೇಹಮಯಿ ಕೃಷ್ಣ ದೂರು ದಾಖಲು

Sampriya
ಮಂಗಳವಾರ, 4 ಫೆಬ್ರವರಿ 2025 (19:46 IST)
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಮುಡಾ ಪ್ರಕರಣದ ದೂರುದಾರ, ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಮೈಸೂರು ಲೋಕಾಯುಕ್ತ ಎಸ್ಪಿ ಅವರಿಗೆ ಮತ್ತೊಂದು ದೂರು ಸಲ್ಲಿಸಿ, ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯ ಕುಟುಂಬಕ್ಕೆ ಕೆಸರೆ ಗ್ರಾಮದ 3.16 ಎಕರೆ ಜಾಗವನ್ನು ಅರಿಶಿನ ಕುಂಕುಮ ರೂಪದಲ್ಲಿ ಸಿದ್ದರಾಮಯ್ಯ ಪತ್ನಿಗೆ ಅವರ ಸೋದರ ಮಲ್ಲಿಕಾರ್ಜುನ್‌ ಸ್ವಾಮಿ ದಾನ ಮಾಡಿದಂತೆಯೇ, 1983ರಲ್ಲಿ ಆಲನಹಳ್ಳಿ ಸರ್ವೆ ನಂಬರ್‌ 113/4ರಲ್ಲಿ ಒಂದು ಎಕರೆ ಭೂಮಿ ಖರೀದಿ ಮಾಡಿದ್ದಾರೆ. ಆ ಭೂಮಿಗೆ 1996ರಲ್ಲಿ ಮುಡಾ ಅಂತಿಮ ಅಧಿಸೂಚನೆ ಹೊರಡಿಸಿದ್ದು, ಡಿನೋಟಿಫೈ ಮಾಡಲಾಗಿದೆ. ಸಿದ್ದರಾಮಯ್ಯ ಅವರ ಪ್ರಭಾವ ಬೀರಿ ಡಿನೋಟಿಫೈ ಮಾಡಲಾಗಿದೆ ಎಂದು ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ.

ಇದೇ ಒಂದು ಎಕರೆ ಭೂಮಿಯನ್ನು ಮಲ್ಲಿಕಾರ್ಜುನ್‌ ಸ್ವಾಮಿ 2010ರ ಅಕ್ಟೋಬರ್​​ನಲ್ಲಿ ಸಿಎಂ ಪತ್ನಿಗೆ ದಾನ ಮಾಡಿದ್ದಾರೆ. ಆ ಭೂಮಿಯನ್ನು ಒಂದೇ ತಿಂಗಳಲ್ಲಿ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೆಸರಿಗೆ ದಾನ ಮಾಡಲಾಗಿದೆ. ಬಳಿಕ ಭೂಮಿಯನ್ನು ಯತೀಂದ್ರ ಸಿದ್ದರಾಮಯ್ಯ ದಾನ ಪಡೆದ ನಾಲ್ಕು ತಿಂಗಳಲ್ಲೇ ಬೇರೆಯವರಿಗೆ ಮಾರಿದ್ದಾರೆ. ಈ ಎಲ್ಲಾ ವಿಚಾರಗಳನ್ನು ಸಿದ್ದರಾಮಯ್ಯ ಎಲ್ಲಿಯೂ ದಾಖಲೆಗಳಲ್ಲಿ ತಿಳಿಸಿಲ್ಲ. ಹಾಗಾಗಿ, ಸಿದ್ದರಾಮಯ್ಯ ಕುಟುಂಬ, ಮಲ್ಲಿಕಾರ್ಜುನ ಸ್ವಾಮಿ ಹೆಸರಿನಲ್ಲಿ ಆಸ್ತಿ ಖರೀದಿ ಮಾಡಿರುವ ಶಂಕೆ ಇದೆ ಎಂದು ದೂರಿನಲ್ಲಿ ವಿವರಿಸಿದ್ದಾರೆ.

ಮಲ್ಲಿಕಾರ್ಜುನ್‌ ಸ್ವಾಮಿ ಪದೇ ಪದೆ ಆಸ್ತಿಗಳನ್ನು ತಮ್ಮ ಸಹೋದರಿಗೆ ದಾನ ನೀಡುವುದು ಯಾಕೆ? ಅವರ ಬಳಿ ಎಷ್ಟು ಭೂಮಿ ಇದೆ ಹಾಗೂ ಹೀಗೆ ದಾನ ಪಡೆದ ಭೂಮಿಯನ್ನು ತಕ್ಷಣ ಮಾರುವುದು ಯಾಕೆ? ಎಂಬ ಎಲ್ಲಾ ವಿಚಾರಗಳ ಬಗ್ಗೆ ಲೋಕಾಯುಕ್ತ ತನಿಖೆ ಮಾಡಬೇಕು. ಇಲ್ಲದಿದ್ದರೆ ಕಾನೂನು ಹೋರಾಟ ನಡೆಸುತ್ತೇನೆ ಎಂದು ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಪಾಕಿಸ್ತಾನದ ಮುಂದೆ ನಮ್ಮ ಎಷ್ಟು ವಿಮಾನ ಕಳೆದುಕೊಂಡಿತು ಲೆಕ್ಕ ಕೊಡಿ

ಟರ್ಕಿ ಸೇಬು ಬಹಿಷ್ಕಾರಕ್ಕೆ ಹೆಚ್ಚಿದ ಒತ್ತಾಯ: 24ರಂದು ಪ್ರಧಾನಿಯೊಂದಿಗೆ ಚರ್ಚೆ

India Pakistan: ತಿನ್ನೋದು ಭಾರತದ ಅನ್ನ, ಸೇವೆ ಮಾತ್ರ ಪಾಕಿಸ್ತಾನಕ್ಕೆ: ಯುಪಿ ವ್ಯಕ್ತಿ ಅರೆಸ್ಟ್

ನಿಮ್ಮ ಪ್ರಾಮಾಣಿಕತೆಯನ್ನು ಮೆಚ್ಚಿದೆ: ಡಿಕೆ ಶಿವಕುಮಾರ್‌ಗೆ ಟಾಂಗ್ ಕೊಟ್ಟ ಸಂಸದ ತೇಜಸ್ವಿ ಸೂರ್ಯ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments