Webdunia - Bharat's app for daily news and videos

Install App

ಫಲಿತಾಂಶದ ಬಳಿಕ ರಾಷ್ಟ್ರದ್ರೋಹಿ ಚಟುವಟಿಕೆಗಳು ಹೆಚ್ಚಾಗಿವೆ : ಈಶ್ವರಪ್ಪ

Webdunia
ಮಂಗಳವಾರ, 16 ಮೇ 2023 (09:44 IST)
ಶಿವಮೊಗ್ಗ : ಚುನಾವಣಾ ಫಲಿತಾಂಶ ಹೊರ ಬಿದ್ದ ನಂತರ ರಾಜ್ಯದಲ್ಲಿ ರಾಷ್ಟ್ರದ್ರೋಹಿ ಚಟುವಟಿಕೆಗಳು ಹೆಚ್ಚಾಗುತ್ತಿದೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಆರೋಪಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ಪಾಕ್ ಪರ ಘೋಷಣೆ ಕೂಗಲಾಗಿದೆ. 5 ಜನರ ವಿರುದ್ಧ ಟಿಳಕವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಕೆಲವರು ಈ ರೀತಿಯ ಘೋಷಣೆಯೇ ಕೂಗಿಲ್ಲ ಎನ್ನುತ್ತಿದ್ದಾರೆ. ಘಟನೆಯ ವಿರುದ್ಧ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿದ್ದಾರೆ.

ಬೆಳಗಾವಿ ಕ್ಷೇತ್ರದಲ್ಲಿ ಆಯ್ಕೆಯಾದ ನೂತನ ಕಾಂಗ್ರೆಸ್ ಶಾಸಕ ಅಜೀಜ್ ಶೇಖ್ ಸಹ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ. ಇದನ್ನು ಅವರು ಒಪ್ಪಿಕೊಂಡಂತಾಗಿದೆ. ಭಟ್ಕಳದಲ್ಲಿಯೂ ಈ ರೀತಿ ನಡೆದಿದೆ. ಇದು ಒಳ್ಳೆಯದಲ್ಲ ಎಂದರು.

ಮುಖ್ಯಮಂತ್ರಿ ಸ್ಥಾನಕ್ಕೆ ಡಿಕೆಶಿ ಮತ್ತು ಸಿದ್ದರಾಮಯ್ಯನವರ ನಡುವೆ ಜಾತಿ ಲಾಬಿ ನಡೆಯುತ್ತಿದೆ. ಡಿಕೆಶಿ ಪರ ಒಕ್ಕಲಿಗರು ಮತ್ತು ಸಿದ್ದರಾಮಯ್ಯನವರ ಪರ ಕುರುಬರ ಲಾಬಿ ನಡೆಯುತ್ತಿದೆ. ಇದು ನೇರವಾಗಿ ಜಾತಿವಾದಿಗಳು ಎಂದು ಒಪ್ಪಿಕೊಂಡಂತಾಗಿದೆ. ಬಿಜೆಪಿಗೆ ಇವರು ಕೋಮುವಾದಿಗಳು ಎನ್ನುತ್ತಿದ್ದರು. ಈಗ ಅವರು ಮಾಡುತ್ತಿರುವುದು ಏನು? ಎಂದು ಪ್ರಶ್ನಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments