Publish Date: Thu, 27 Apr 2023 (20:40 IST)
Updated Date: Thu, 27 Apr 2023 (20:06 IST)
ನನಗೆ ಟಿಕೆಟ್ ಕೈತಪ್ಪಲು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಕಾರಣ ಎಂದು ಮಾಜಿ ಸಿಎಂ ಜಗದೀಶ್ ಆರೋಪ ಮಾಡಿದ್ರು.. ಈ ಕುರಿತು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.. ಮೈಸೂರಿನಲ್ಲಿ ಮಾತನಾಡಿದ ಅವರು, ಬಿ.ಎಲ್ ಸಂತೋಷ್ ಒಬ್ಬ ಸಂತ.. ಪಕ್ಷಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಿ ಕೆಲಸ ಮಾಡುತ್ತಿದ್ದಾರೆ. .ಅವರ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ಶೆಟ್ಟರ್ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.. ಇನ್ನು ಬಿಜೆಪಿಯಿಂದ ಜಗದೀಶ್ ಶೆಟ್ಟರ್ ಎಲ್ಲವನ್ನೂ ಪಡೆದು ಸಿಎಂ ಆಗಿದ್ದಾರೆ.. ಈಗ ಈ ರೀತಿ ಮಾತನಾಡುವುದು ಸರಿಯಲ್ಲ ಎಂದರು. ಈಗ ಜಗದೀಶ ಶೆಟ್ಟರ್ ಕಾಂಗ್ರೆಸ್ ಸೇರಿದ್ದಾರೆ, ಮುಂದೆ ಅವರಿಗೆ ಗೊತ್ತಾಗುತ್ತದೆ.. ಅವರ ಮುಂದೆ ಸೋತ ನಂತರ ಅವರಿಗೆ ಅರಿವಾಗುತ್ತದೆ ಎಂದಿದ್ದಾರೆ