Publish Date: Mon, 10 Apr 2023 (10:44 IST)
Updated Date: Mon, 10 Apr 2023 (10:04 IST)
ಬೆಂಗಳೂರು : ಕಾಡಿಗೆ ಸಫಾರಿಗೆಂದು ಹೋದಾಗ ಸಫಾರಿ ಡ್ರೆಸ್ನಲ್ಲಿ ಇರಬೇಕು. ನಾಡಿಗೆ ಬಂದಾಗ ನಾಡಿನ ಡ್ರೆಸ್ನಲ್ಲಿ ಇರಬೇಕು. ಆದರೆ ಕುಮಾರಸ್ವಾಮಿ ಅವರಿಗೆ ಅದು ಎರಡೂ ಹಾಕಲು ಬರುವುದಿಲ್ಲವಲ್ಲ, ಏನುಮಾಡುವುದು ಎಂದು ಮೋದಿ ಬಂಡೀಪುರ ಅರಣ್ಯ ಭೇಟಿಗೆ ಕುಮಾರಸ್ವಾಮಿ ವ್ಯಂಗ್ಯ ವಿಚಾರವಾಗಿ ಸಚಿವ ಅಶ್ವಥ್ ನಾರಾಯಣ್ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರು ಯಾವ ಯಾವ ಜಾಗಕ್ಕೆ ಯಾವ ಯಾವ ವೇಷಗಳನ್ನು ಹಾಕಬೇಕೋ ಅದಕ್ಕೆ ಸೂಕ್ತವಾದ ಬಟ್ಟೆಗಳನ್ನು ಹಾಕುತ್ತಾರೆ. ಇಡೀ ವಿಶ್ವವನ್ನೇ ನಾವು ಪ್ರತಿನಿಧಿಸುತ್ತಿದ್ದೇವೆ. 140 ಕೋಟಿ ಜನರಿಗೆ ನಾಯಕ ಅವರು. ಅಂತಹ ರೋಲ್ ಮಾಡೆಲ್ಗೆ ರೋಲ್ ಮಾಡೆಲ್ ತರಹ ಇರಬೇಡಿ ಸ್ವಾಮಿ ಎಂದು ಹೇಳಲಾಗುವುದಿಲ್ಲ ಎಂದರು.