Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಅಸ್ಸಾಂ ಕಾರ್ಮಿಕರು ಕಾಫಿ ತೋಟದ ಮಾಲೀಕನ ಮೇಲೆ ಹಲ್ಲೆಗೆ ಯತ್ನಿಸಿರುವ ಆರೋಪ ಕೇಳಿ ಬಂದಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಠಾಣಾ ವ್ಯಾಪ್ತಿಯ ದ್ಯಾವನಗೂಲ್ ಹ್ಯಾರೀಸ್ ಎಸ್ಟೇಟ್ನಲ್ಲಿ ಘಟನೆ ನಡೆದಿದೆ. ಹ್ಯಾರೀಸ್ ಎಸ್ಟೇಟ್ನ ಮಾಲೀಕರಾದ ಅಜ್ಘರ್ ಅಹಮ್ಮದ್ ಅವರ ಮೇಲೆ ಅವರ ತೋಟದ ಅಸ್ಸಾಂ ಕಾರ್ಮಿಕರು ಹಲ್ಲೆ ನಡೆಸಲು ಮುಂದಾಗಿದ್ದಾರೆ ಎಂದು ಆರೋಪಿಸಲಾಗಿದೆ. ಅಸ್ಸಾಂ ದಾಖಲೆಗಳ ಜೊತೆ ಅಕ್ರಮ ಬಾಂಗ್ಲಾ ನಿವಾಸಿಗಳು ಕೆಲಸಕ್ಕೆ ಬಂದಿದ್ಧಾರೆ. ಅಡ್ವಾನ್ಸ್ ಪಡೆದು, ಕೆಲಸ ಮಾಡಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಮಚ್ಚು, ದೊಣ್ಣೆಗಳಿಂದ ಹಲ್ಲೆಗೆ ಯತ್ನಿಸಲಾಗಿದೆ. ಈ ಬಗ್ಗೆ ಅಜ್ಘರ್ ಅಹಮ್ಮದ್ ಅವರು ಬಣಕಲ್ ಠಾಣೆಗೆ ದೂರು ನೀಡಿದ್ದಾರೆ. ದೂರು ಸ್ವೀಕರಿಸಿದ ಬಣಕಲ್ ಪೊಲೀಸರು ಈ ಬಗ್ಗೆ ತನಿಖೆ ಕೈಗೊಂಡಿದ್ದಾರೆ.