Publish Date: Sun, 08 Oct 2023 (08:50 IST)
Updated Date: Sun, 08 Oct 2023 (09:01 IST)
ಬೆಂಗಳೂರು: ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಪಟಾಕಿ ಗೋಡೌನ್ ನಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ.
ಮೃತಪಟ್ಟ ಕಾರ್ಮಿಕರು ಬಹುತೇಕ ತಮಿಳುನಾಡು ಮೂಲದವರು. ಇನ್ನು, ಹಲವರು ಗಾಯಗೊಂಡಿದ್ದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ಮಧ್ಯಾಹ್ನ ಪಟಾಕಿ ಅನ್ ಲೋಡ್ ಮಾಡುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಮಾಲಿಕರ ನಿರ್ಲಕ್ಷ್ಯತನದಿಂದಲೇ ದುರಂತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.
ಈ ಸಂಬಂಧ ಮಾಲಿಕ ರಾಮಸ್ವಾಮಿ ರೆಡ್ಡಿ ಮತ್ತು ಜಾಗದ ಮಾಲಿಕ ಅನಿಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಾಲಿಕರ ಪುತ್ರನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ದುರಂತ ಸ್ಥಳಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲಿಸಲಿದ್ದಾರೆ.