Publish Date: Tue, 22 Aug 2023 (20:03 IST)
Updated Date: Tue, 22 Aug 2023 (20:06 IST)
ಹೃದಯಾಘಾತವಾಗಿ ಆಟೋ ಚಾಲಕ ಸ್ಥಳದಲ್ಲೇ ಸಾವನಾಪ್ಪಿದ್ದಾನೆ.ಹೃದಯಾಘಾತವಾಗಿ ಆಟೋ ಚಾಲಕ ಸ್ಥಳದಲ್ಲೆ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ತಿಮ್ಮೇಶ್ (53) ಮೃತ ದುರ್ದೈವಿ. ಸಂಪಂಗಿ ರಾಮನಗರದಲ್ಲಿ ಟೀ ಕುಡಿಯಲು ಆಟೋ ನಿಲ್ಲಿಸಿ ತೆರಳುತ್ತಿದ್ದ ತಿಮ್ಮೇಶ್ ಮೃತಪಟ್ಟಿದ್ದಾರೆ. ಆಟೋದಿಂದಲೇ ಇಳಿಯುವಾಗ ಎದೆ ನೋವು ಕಾಣಿಸಿಕೊಂಡಿತ್ತು. ಎದೆಯನ್ನ ಸವರಿಸಿಕೊಳ್ಳುತ್ತ ಆಟೋದಿಂದ ತಿಮ್ಮೇಶ್ ಇಳಿದು ಹೋಗುವ ಕೊನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.