Webdunia - Bharat's app for daily news and videos

Install App

3ತಿಂಗ್ಳ ಬಳಿಕ ಬಿ.ನಾಗೇಂದ್ರಗೆ ಷರತ್ತು ಬದ್ಧ ಜಾಮೀನು ಮಂಜೂರು

Sampriya
ಸೋಮವಾರ, 14 ಅಕ್ಟೋಬರ್ 2024 (17:35 IST)
Photo Courtesy X
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ಹಗರಣ ಕೇಸ್‌ನಲ್ಲಿ ಬಂಧಿತವಾಗಿರುವ ಮಾಜಿ ಸಚಿವ ಬಿ ನಾಗೇಂದ್ರ ಅವರಿಗೆ ಸಿಟಿ ಸಿವಿಲ್ ನ್ಯಾಯಾಲಯ  ಷರತ್ತು ಬದ್ಧ ಜಾಮೀನು ನೀಡಿದೆ. 2 ಲಕ್ಷ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಮೇರೆಗೆ ಇದೀಗ ಬಿ ನಾಗೇಂದ್ರಗೆ ಜಾಮೀನು ನೀಡಿದೆ.  

ಹಗರಣದ ಮಾಸ್ಟರ್‌ಮೈಂಡ್‌ ನಾಗೇಂದ್ರ:

ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ 187 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಇಡಿ ಬೆಂಗಳೂರಿನ ಜನಪ್ರತಿನಿಗಳ ವಿಶೇಷ ನ್ಯಾಯಾಲಯಕ್ಕೆ 24 ಮಂದಿ ಆರೋಪಿಗಳ ವಿರುದ್ಧದ ದೋಷರೋಪ ಪಟ್ಟಿಯನ್ನು ಅ.5ರಂದು ಸಲ್ಲಿಕೆ ಮಾಡಿತ್ತು. ಚಾರ್ಜ್‌ಶೀಟ್‌ನಲ್ಲಿ ನಾಗೇಂದ್ರನೇ ಈ ಪ್ರಕರಣದ ಮಾಸ್ಟರ್‌ಮೈಂಡ್ ಎಂದು ಉಲ್ಲೇಖ ಮಾಡಲಾಗಿತ್ತು.


 ಸತ್ಯನಾರಾಯಣ ವರ್ಮಾ, ಪದ್ಮನಾಭ, ನಾಗೇಶ್‌ರಾವ್, ನೆಕ್ಕಂಟಿ ನಾಗರಾಜ್, ವಿಜಯ್‌ಕುಮಾರ್ ಸೇರಿ 24 ಮಂದಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿತ್ತು. ಮೇ 2024 ರಲ್ಲಿ ನಿಗಮದ ಉದ್ಯೋಗಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡ ನಂತರ ಈ ಬಹುಕೋಟಿ ಹಗರಣ ಬೆಳಕಿಗೆ ಬಂದು, ಇಡೀ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್‌ ಒತ್ತಡಕ್ಕೆ ಮಣಿದ ಬಸವರಾಜ ಹೊರಟ್ಟಿ, ಕೊನೆಗೂ ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ರಾಜೀನಾಮೆ

ಅಬ್ಬಬ್ಬಾ ಏನು ಪ್ರಿತಿನೋ ಈತನಿಗೆ.. ಸಚಿವ ನಾಗೇಂದ್ರಗೆ ಗದೆ ಗಿಫ್ಟ್ ಕೊಡಲು ಬಂದ ಸ್ಟೈಲ್ ನೋಡಿ Video

ಎಸ್ಕಲೇಟರ್ ನಲ್ಲಿ ಆಡುತ್ತಿದ್ದ ಮಗು ಬಿದ್ದು ಪ್ರಾಣವೇ ಹೋಯ್ತು ಎನ್ನುವಾಗ ಹೀರೋನಂತೆ ಬಂದ ವ್ಯಕ್ತಿ: Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಸ್ಪೀಕರ್ ಸ್ಥಾನ ಕೊಡಲ್ಲ ಎಂದು ಕಾಂಗ್ರೆಸ್, ಬಿಡಲ್ಲ ಎಂದು ಬಸವರಾಜ ಹೊರಟ್ಟಿ: ಜಿದ್ದಾ ಜಿದ್ದಿ

ಮುಂದಿನ ಸುದ್ದಿ
Show comments