Webdunia - Bharat's app for daily news and videos

Install App

ವಾಲ್ಮೀಕಿ ನಿಗಮ ಹಗರಣ ಹಣದಲ್ಲಿ ಬಿವೈ ವಿಜಯೇಂದ್ರಗೂ ಪಾಲು ಸಿಕ್ಕಿದೆ: ಬಿ ಶ್ರೀರಾಮುಲು ಎಡವಟ್ಟು

Krishnaveni K
ಸೋಮವಾರ, 4 ನವೆಂಬರ್ 2024 (11:06 IST)
ಬಳ್ಳಾರಿ: ವಾಲ್ಮೀಕಿ ನಿಗಮ ಹಗರಣ ರಾಜ್ಯದ ಕಾಂಗ್ರೆಸ್ ಸರ್ಕಾರ ಮುಜುಗರಕ್ಕೀಡು ಮಾಡುವಂತೆ ಮಾಡಿತ್ತು. ಈ ಪ್ರಕರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆಗಳೂ ನಡೆದಿತ್ತು. ಆದರೆ ವಿಜಯೇಂದ್ರಗೇ ಹಗರಣದ ಹಣದ ಪಾಲು ಹೋಗಿದೆ ಎಂದು ಬಿಜೆಪಿ ನಾಯಕ ಶ್ರೀರಾಮುಲು ಹೇಳಿಕೆ ನೀಡಿ ಎಡವಟ್ಟು ಮಾಡಿದ್ದಾರೆ.

ಸಂಡೂರು ಉಪಚುನಾವಣೆ ಪ್ರಚಾರ ಸಮಾವೇಶದಲ್ಲಿ ಬಿ ಶ್ರೀರಾಮುಲು ಮಾತನಾಡುವಾಗ ವೇದಿಕೆಯಲ್ಲಿ ವಿಜಯೇಂದ್ರ ಕೂಡಾ ಇದ್ದರು. ಈ ವೇಳೆ ಅವರ ಎದುರೇ ವಾಲ್ಮೀಕಿ ನಿಗಮ ಹಗರಣದಲ್ಲಿ ಕೋಟ್ಯಾಂತರ ರೂಪಾಯಿ ಹಣ ಕೊಳ್ಳೆ ಹೊಡೆದಿದ್ದಾರೆ. ವಿಜಯೇಂದ್ರಗೂ ಹಣದ ಪಾಲು ಹೋಗಿದೆ ಎಂದು ಎಡವಟ್ಟು ಮಾಡಿದರು.

ಬಳ್ಳಾರಿ ಸಂಸದ ಇ ತುಕರಾಂ ಎನ್ನುವ ಬದಲು ಶ್ರೀರಾಮುಲು ಬಾಯ್ತಪ್ಪಿ ವಿಜಯೇಂದ್ರ ಹೆಸರು ಹೇಳಿದರು. ಆದರೆ ಶ್ರೀರಾಮುಲು ಎಡವಟ್ಟು ಮಾಡಿದ್ದನ್ನು ಅರಿತ ಅಲ್ಲಿದ್ದವರು ತುಕರಾಂ ಎಂದು ತಿದ್ದಿದರು. ತಕ್ಷಣವೇ ಸಾವರಿಸಿಕೊಂಡ ಶ್ರೀರಾಮುಲು ತಪ್ಪು ಸರಿಪಡಿಸಿಕೊಂಡು ತುಕರಾಂಗೂ ಪಾಲು ಹೋಗಿದೆ ಎಂದರು. ವೇದಿಕೆಯಲ್ಲಿದ್ದ ಬಿವೈ ವಿಜಯೇಂದ್ರ ಈ ಮಾತು ಕೇಳಿಸಿಕೊಂಡು ಕಿರುನಗೆ ನಕ್ಕರು.

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲ್ಲಲೇಬೇಕು ಎಂದು ಪಣತೊಟ್ಟು ಬಿಜೆಪಿ ಅಭ್ಯರ್ಥಿ ಪರವಾಗಿ ಶ್ರೀರಾಮುಲು ಮತ್ತು ಜನಾರ್ಧನ ರೆಡ್ಡಿ ಜೊತೆಯಾಗಿ ನಿಂತು ಪ್ರಚಾರ ನಡೆಸುತ್ತಿದ್ದಾರೆ. ಇದರ ನಡುವೆ ಈ ಎಡವಟ್ಟು ಎಲ್ಲರ ನಗೆಪಾಟಲಿಗೀಡಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

ಮುಂದಿನ ಸುದ್ದಿ
Show comments